‘ಬೆಂಗಳೂರಿನ ಎಲ್ಲ ರೌಡಿಗಳು ಶಾಸಕ ಎಸ್.ಆರ್.ವಿಶ್ವನಾಥ್ ಜತೆಗೆ ಇದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಕ್ಕೆ ಮೈಸೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿ, ‘ಈ ರೀತಿಯ ಕೆಟ್ಟ ರಾಜಕಾರಣದ ಅವಶ್ಯಕತೆ ನಮ್ಮ ರಾಜ್ಯಕ್ಕೆ ಇದೆಯೇ ಎಂಬುದನ್ನು ಅವರು ಯೋಚನೆ ಮಾಡಿಕೊಳ್ಳಲಿ. ಇದು ಯಾರಿಗೂ ಶೋಭೆ ತರುವುದಲ್ಲ. ಕಾಂಗ್ರೆಸ್ನ ಮುಖಂಡರು ಈ ಕೃತ್ಯವನ್ನು ಸಮರ್ಥಿಸಿಕೊಳ್ಳುವರು ಎಂದರೆ ಅವರ ಹಿನ್ನೆಲೆ ಏನೆಂಬುದು ಅರ್ಥವಾಗುತ್ತದೆ’ ಎಂದು ಹರಿಹಾಯ್ದರು.