ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಫಲಿತಾಂಶವನ್ನು ಮುಖ್ಯಮಂತ್ರಿ ಅಥವಾ ಆಡಳಿತ ಪಕ್ಷದ ವಿರುದ್ಧದ ಜನಾದೇಶ ಭಾವಿಸಿಲ್ಲ. ಹಾನಗಲ್ ಕ್ಷೇತ್ರದಲ್ಲಿ ಶ್ರೀನಿವಾಸ ಮಾನೆ ಅವರು ಈ ಹಿಂದೆ ಸೋತ ದಿನದಿಂದ ನಿರಂತರವಾಗಿ ಜನರ ಸಂಪರ್ಕದಲ್ಲಿ ಇದ್ದದ್ದು ಅವರ ಗೆಲುವಿಗೆ ಪೂರಕವಾಯಿತು. ನಾಮಪತ್ರ ಸಲ್ಲಿಕೆ ಕೊನೆಯ ದಿನದ ಹಿಂದಿನ ದಿನದವರೆಗೂ ಬಿಜೆಪಿ ಅಭ್ಯರ್ಥಿ ಆಯ್ಕೆ ಅಂತಿಮ ಮಾಡದಿದ್ದುದು ಸೋಲಿಗೆ ಭಾಗಶಃ ಪರಿಣಾಮ ಬೀರಿದೆ. ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡಿದ್ದೆವು’ ಎಂದು ವಿಶ್ಲೇಷಿಸಿದರು.