ಬೆಂಗಳೂರು: ಕಳಸಾ ಬಂಡೂರಿ, ತುಪ್ರಿ ಹಳ್ಳ ನೀರಾವರಿ ಯೋಜನೆ, ಹುಬ್ಬಳ್ಳಿ– ಅಂಕೋಲಾ ರೈಲ್ವೆ ಹಳಿ, ಸಾರಿಗೆ ನಿಗಮಗಳ ಪುನರುಜ್ಜೀವನ, ವೈದ್ಯಕೀಯ ಕಾಲೇಜುಗಳಲ್ಲಿ ನೇಮಕಾತಿ ಹೀಗೆ ಹಲವು ವಿಚಾರವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಬಿಜೆಪಿಯ ಜಗದೀಶ ಶೆಟ್ಟರ್ ಬಿಸಿ ಮುಟ್ಟಿಸಿದ ಪ್ರಸಂಗ ವಿಧಾನ ಸಭೆಯಲ್ಲಿ ಬುಧವಾರ ನಡೆಯಿತು.