ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿರುವ ಅವರು, ‘ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಅತ್ಯಂತ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಅವರ ಕುಟುಂಬದ ಜೊತೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.