ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಕೇಂದ್ರ ಗೃಹ ಸಚಿವಾಲಯ ಆ.3ರಂದು ಈ ಬಗ್ಗೆ ಎನ್ಐಎ ಮಹಾನಿರ್ದೇಶಕರಿಗೆ ಆದೇಶ ನೀಡಿದೆ. ಪ್ರಕರಣ ಎನ್ಐಎ ಕಾಯ್ದೆ 2008ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಬಂದಿದೆ. ಇದರ ಗಂಭೀರತೆ, ಮತ್ತದರ ಅಂತರ ರಾಜ್ಯ ಪರಿಣಾಮಗಳನ್ನು ಪರಿಗಣಿಸಿ, ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.