<p><strong>ಬೆಂಗಳೂರು</strong>: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಪ್ರಾಮಾಣಿಕರಾಗಿದ್ದರೆ ಇ.ಡಿ ತನಿಖೆಗೆ ಯಾಕೆ ಹೆದರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.</p>.<p>ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ ನಡೆದುಕೊಂಡ ಕಾರಣ ಇ.ಡಿ ನೋಟಿಸ್ ಕೊಟ್ಟಿದೆ. ಭ್ರಷ್ಟಾಚಾರ ಮಾಡಿದ್ದರೆ ಅವರನ್ನು ಸುಮ್ಮನೇ ಬಿಟ್ಟುಬಿಡಬೇಕೆಂದು ಕಾಂಗ್ರೆಸ್ ಬಯಸುತ್ತದೆಯೇ’ ಎಂದು ಪ್ರಶ್ನಿಸಿದರು.</p>.<p>ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಗೌರವವೇ ಇಲ್ಲ. ಸೋನಿಯಾ ಮತ್ತು ರಾಹುಲ್ ಈ ಎಲ್ಲ ಸಂಸ್ಥೆಗಳಿಗಿಂತಲೂ ಅತೀತರು ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿರುವುದರಿಂದಲೇ ಅವರು ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಂಡಿದ್ದಾರೆ. ಸಂವಿಧಾನ ರಚನೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿಗರಿಗೆ ಪ್ರಭಾವ ಇತ್ತು. ಕಾಂಗ್ರೆಸ್ನವರು ಭ್ರಷ್ಟಾಚಾರ ಮಾಡಿದರೆ ಪ್ರಶ್ನಿಸುವಂತಿಲ್ಲ ಎಂಬ ವಿಧಿಯನ್ನು ಸಂವಿಧಾನದಲ್ಲಿ ಆಗಲೇ ಸೇರಿಸಬಹುದಿತ್ತು. ಒಂದು ವೇಳೆ ಆ ರೀತಿ ಸೇರಿಸಿದ್ದರೆ, ಈಗ ತನಿಖೆ ಮಾಡಿದರೆ ಸಂವಿಧಾನ ವಿರೋಧಿ ಆಗುತ್ತಿತ್ತು. ಈಗ ಸಂವಿಧಾನ ಬದ್ಧವಾಗಿಯೇ ತನಿಖೆ ನಡೆಯುತ್ತಿದೆ ಎಂದು ರವಿ ಹೇಳಿದರು.</p>.<p>‘ನರೇಂದ್ರಮೋದಿ ಅವರನ್ನು ಎಸ್ಐಟಿ ವಿಚಾರಣೆ ಕರೆಸಿದಾಗ ಹೇಗೆ ನಡೆದುಕೊಂಡಿದ್ದರು ಎಂಬುದನ್ನು ನೋಡಿ ಕಾಂಗ್ರೆಸ್ನವರು ಕಲಿಯಬೇಕಿದೆ. ಸತತ 7 ಗಂಟೆ ತನಿಖೆಗೆ ಹಾಜರಾದರು. ನಿಮ್ಮಂತೆ ನಾಟಕ ಮಾಡಲಿಲ್ಲ, ಜನ ಸೇರಿಸಿ ಪ್ರತಿಭಟನೆ ಮಾಡಲಿಲ್ಲ. ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣದಲ್ಲಿ ಜನರನ್ನು ಸೇರಿಸಿ ಗದ್ದಲ ಎಬ್ಬಿಸಿ ಮುಚ್ಚಿ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ’ ಎಂದು ದೂರಿದರು.</p>.<p>ಸೋನಿಯಾಗಾಂಧಿ ಮತ್ತು ಇತರರು ಜೈಲಿಗೆ ಹೋಗಲಿದ್ದಾರೆಯೇ ಎಂಬುದನ್ನು ತನಿಖಾ ಸಂಸ್ಥೆಗಳೇ ನಿರ್ಧರಿಸಬೇಕು. ನ್ಯಾಯಾಲಯ ಆ ಕುರಿತು ತಿಳಿಸಬೇಕು. ಜೈಲಿಗೆ ಕಳುಹಿಸುವ ಅಧಿಕಾರ ನನಗಿಲ್ಲ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸೋನಿಯಾ ಮತ್ತು ರಾಹುಲ್ ಅಮಾಯಕರಲ್ಲ. ಆಮಾಯಕರಾಗಿದ್ದರೆ, ಶೇ 38 ರಷ್ಟು ಷೇರುಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳುತ್ತಿರಲಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಪ್ರಾಮಾಣಿಕರಾಗಿದ್ದರೆ ಇ.ಡಿ ತನಿಖೆಗೆ ಯಾಕೆ ಹೆದರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.</p>.<p>ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ ನಡೆದುಕೊಂಡ ಕಾರಣ ಇ.ಡಿ ನೋಟಿಸ್ ಕೊಟ್ಟಿದೆ. ಭ್ರಷ್ಟಾಚಾರ ಮಾಡಿದ್ದರೆ ಅವರನ್ನು ಸುಮ್ಮನೇ ಬಿಟ್ಟುಬಿಡಬೇಕೆಂದು ಕಾಂಗ್ರೆಸ್ ಬಯಸುತ್ತದೆಯೇ’ ಎಂದು ಪ್ರಶ್ನಿಸಿದರು.</p>.<p>ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಗೌರವವೇ ಇಲ್ಲ. ಸೋನಿಯಾ ಮತ್ತು ರಾಹುಲ್ ಈ ಎಲ್ಲ ಸಂಸ್ಥೆಗಳಿಗಿಂತಲೂ ಅತೀತರು ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿರುವುದರಿಂದಲೇ ಅವರು ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಂಡಿದ್ದಾರೆ. ಸಂವಿಧಾನ ರಚನೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿಗರಿಗೆ ಪ್ರಭಾವ ಇತ್ತು. ಕಾಂಗ್ರೆಸ್ನವರು ಭ್ರಷ್ಟಾಚಾರ ಮಾಡಿದರೆ ಪ್ರಶ್ನಿಸುವಂತಿಲ್ಲ ಎಂಬ ವಿಧಿಯನ್ನು ಸಂವಿಧಾನದಲ್ಲಿ ಆಗಲೇ ಸೇರಿಸಬಹುದಿತ್ತು. ಒಂದು ವೇಳೆ ಆ ರೀತಿ ಸೇರಿಸಿದ್ದರೆ, ಈಗ ತನಿಖೆ ಮಾಡಿದರೆ ಸಂವಿಧಾನ ವಿರೋಧಿ ಆಗುತ್ತಿತ್ತು. ಈಗ ಸಂವಿಧಾನ ಬದ್ಧವಾಗಿಯೇ ತನಿಖೆ ನಡೆಯುತ್ತಿದೆ ಎಂದು ರವಿ ಹೇಳಿದರು.</p>.<p>‘ನರೇಂದ್ರಮೋದಿ ಅವರನ್ನು ಎಸ್ಐಟಿ ವಿಚಾರಣೆ ಕರೆಸಿದಾಗ ಹೇಗೆ ನಡೆದುಕೊಂಡಿದ್ದರು ಎಂಬುದನ್ನು ನೋಡಿ ಕಾಂಗ್ರೆಸ್ನವರು ಕಲಿಯಬೇಕಿದೆ. ಸತತ 7 ಗಂಟೆ ತನಿಖೆಗೆ ಹಾಜರಾದರು. ನಿಮ್ಮಂತೆ ನಾಟಕ ಮಾಡಲಿಲ್ಲ, ಜನ ಸೇರಿಸಿ ಪ್ರತಿಭಟನೆ ಮಾಡಲಿಲ್ಲ. ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣದಲ್ಲಿ ಜನರನ್ನು ಸೇರಿಸಿ ಗದ್ದಲ ಎಬ್ಬಿಸಿ ಮುಚ್ಚಿ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ’ ಎಂದು ದೂರಿದರು.</p>.<p>ಸೋನಿಯಾಗಾಂಧಿ ಮತ್ತು ಇತರರು ಜೈಲಿಗೆ ಹೋಗಲಿದ್ದಾರೆಯೇ ಎಂಬುದನ್ನು ತನಿಖಾ ಸಂಸ್ಥೆಗಳೇ ನಿರ್ಧರಿಸಬೇಕು. ನ್ಯಾಯಾಲಯ ಆ ಕುರಿತು ತಿಳಿಸಬೇಕು. ಜೈಲಿಗೆ ಕಳುಹಿಸುವ ಅಧಿಕಾರ ನನಗಿಲ್ಲ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸೋನಿಯಾ ಮತ್ತು ರಾಹುಲ್ ಅಮಾಯಕರಲ್ಲ. ಆಮಾಯಕರಾಗಿದ್ದರೆ, ಶೇ 38 ರಷ್ಟು ಷೇರುಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳುತ್ತಿರಲಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>