ಶನಿವಾರ ಸುದ್ದಿಗಾರರೊಂದಿಗೆ ಕಾಂತಾರ ಚಿತ್ರದ ಬಗ್ಗೆ ನಟ ಚೇತನ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜನರು ಭೂತಾರಾಧನೆ, ದೈವಾರಾಧನೆಯನ್ನು ಸಂಪ್ರದಾಯದ ಪ್ರಕಾರ ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದು, ಇದರಲ್ಲೇ ನೆಮ್ಮದಿ ಕಾಣುತ್ತಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ. ಎಲ್ಲರೂ ಇದನ್ನು ಗೌರವಿಸಬೇಕು. ಇಲ್ಲದಿದ್ದರೆ ಸುಮ್ಮನಿರಬೇಕು. ನಮ್ಮ ದೇಶದಲ್ಲಿ ನಾಸ್ತಿಕ, ಆಸ್ತಿಕ ಇಬ್ಬರಿಗೂ ಜಾಗ ಇದೆ’ ಎಂದು ಹೇಳಿದರು.