ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಯಾರಾದರೂ ತೊಡಕಾದರೆ ಗಟ್ಟಿ ಧ್ವನಿಯಲ್ಲಿ ವಿರೋಧಿಸುವೆ. ಮಹದಾಯಿ, ಕಳಸಾ ಬಂಡೂರಿ, ಕೃಷ್ಣ, ಆಲಮಟ್ಟಿ ಭಾಗದ ಅಭಿವೃದ್ಧಿಗೆ ಯಾರೇ ಅಡ್ಡಗಾಲು ಹಾಕಿದರೂ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.