<p><strong>ಬೆಳಗಾವಿ</strong>:‘ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಶುಕ್ರವಾರ ರಾತ್ರಿ ಎರಡು ತಾಸಿಗೂ ಹೆಚ್ಚು ಸಮಯ ನಡೆದ ಬಿಜೆಪಿ ಪ್ರಮುಖ ನಾಯಕರ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>‘ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರವೂ ಮುಖ್ಯಮಂತ್ರಿಯವರಿಗಿದೆ’ ಎಂದರು.</p>.<p>ಇವತ್ತಿನ ಸಭೆ ಮುಖ್ಯಮಂತ್ರಿಯವರಿಗೆ ಆ ಅಧಿಕಾರ ಕೊಟ್ಟಿದೆಯೇ ಎಂಬ ಪ್ರಶ್ನೆಗೆ, ‘ಈಗಾಗಲೇ ಅವರಿಗೆ ಆ ಅಧಿಕಾರ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಇಂದಿನ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸಲು ಚರ್ಚಿಸಲಾಯಿತು ಎಂದು ಹೇಳಿದರು.</p>.<p>ಡಿ.5 ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ‘ಲವ್ ಜಿಹಾದ್’ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯಿಸಲಾಗುವುದು ಎಂದು ತಿಳಿಸಿದರು.</p>.<p>ಸಭೆ ಮುಗಿಸಿ ಹೊರ ಬಂದ ಯಡಿಯೂರಪ್ಪ ಕೆಲಕಾಲ ಏಕಾಂಗಿಯಾಗಿ ನಿಂತಿದ್ದರು. ಅವರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>:‘ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಶುಕ್ರವಾರ ರಾತ್ರಿ ಎರಡು ತಾಸಿಗೂ ಹೆಚ್ಚು ಸಮಯ ನಡೆದ ಬಿಜೆಪಿ ಪ್ರಮುಖ ನಾಯಕರ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>‘ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರವೂ ಮುಖ್ಯಮಂತ್ರಿಯವರಿಗಿದೆ’ ಎಂದರು.</p>.<p>ಇವತ್ತಿನ ಸಭೆ ಮುಖ್ಯಮಂತ್ರಿಯವರಿಗೆ ಆ ಅಧಿಕಾರ ಕೊಟ್ಟಿದೆಯೇ ಎಂಬ ಪ್ರಶ್ನೆಗೆ, ‘ಈಗಾಗಲೇ ಅವರಿಗೆ ಆ ಅಧಿಕಾರ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಇಂದಿನ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸಲು ಚರ್ಚಿಸಲಾಯಿತು ಎಂದು ಹೇಳಿದರು.</p>.<p>ಡಿ.5 ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ‘ಲವ್ ಜಿಹಾದ್’ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯಿಸಲಾಗುವುದು ಎಂದು ತಿಳಿಸಿದರು.</p>.<p>ಸಭೆ ಮುಗಿಸಿ ಹೊರ ಬಂದ ಯಡಿಯೂರಪ್ಪ ಕೆಲಕಾಲ ಏಕಾಂಗಿಯಾಗಿ ನಿಂತಿದ್ದರು. ಅವರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>