ನವದೆಹಲಿಯಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಹಿಂದೆಲ್ಲ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಬಹುಮತ ಪಡೆಯಲು ಬಿಜೆಪಿ ವಿಫಲವಾಗಿತ್ತು. ಆ ಕಾರಣ
ದಿಂದಾಗಿ, ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲೇ ಹೋದರೆ ಗೆಲುವು ಸಾಧ್ಯ ಎಂದು ಸಲಹೆ ನೀಡಿದ್ದೆ. ಅದರರ್ಥ ಏನೆಂದರೆ, ಒಬ್ಬನೇ ವ್ಯಕ್ತಿ ಚುನಾವಣೆ ಕಾರ್ಯತಂತ್ರ ರೂಪಿಸುವ ಬದಲು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಹಾಗೂ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒಟ್ಟಾಗಿ ಕುಳಿತು ತಂತ್ರಗಾರಿಕೆ ಹೆಣೆದರೆ ಗೆಲುವು ಸಲೀಸು ಎಂಬುದಷ್ಟೆ. ಇದು ಪಕ್ಷದ ಕಾರ್ಯಕರ್ತರ ಮಧ್ಯೆ ಇರುವ ಸಾಮಾನ್ಯ ಅಭಿಪ್ರಾಯವೂ ಆಗಿದ್ದರಿಂದ ಹೀಗೆ ಸಲಹೆ ನೀಡಿದ್ದೆ’ ಎಂದು ಸಮಜಾಯಿಷಿ ನೀಡಿದರು.