ಸಿದ್ದರಾಮಯ್ಯ ಹೇಳಿಕೆಯನ್ನು ವಿರೋಧಿಸಿ ಅವರಿಗೆ ಕಳುಹಿಸಲು ಚಡ್ಡಿಗಳನ್ನು ಸಂಗ್ರಹಿಸುವಂತೆ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ನಾರಾಯಣ ಸ್ವಾಮಿ, ಮೋರ್ಚಾ ಸದಸ್ಯರಿಗೆ ಕರೆ ನೀಡಿದ್ದರು. ಸಂಗ್ರಹಿಸಿದ್ದ ಚಡ್ಡಿಗಳನ್ನು ರಟ್ಟಿನ ಪೆಟ್ಟಿಗೆಗಳಲ್ಲಿ ತುಂಬಿ ತಲೆಮೇಲೆ ಹೊತ್ತು ಕುಮಾರಕೃಪಾ ರಸ್ತೆಯ ಮಾರ್ಗವಾಗಿ ಸಿದ್ದರಾಮಯ್ಯ ಅವರ ಅಧಿಕೃತ ನಿವೇಶನದತ್ತ ಬರುತ್ತಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು. ಎಲ್ಲರನ್ನೂ ವಾಹನದಲ್ಲಿ ಕರೆದೊಯ್ದು, ಕೆಲಕಾಲದ ಬಳಿಕ ಬಿಡುಗಡೆ ಮಾಡಿದರು.