9 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಡಾ. ಅಂಬೇಡ್ಕರ್ ಅವರ ಆತ್ಮವೇ ಆಗಿರುವ ಸಂವಿಧಾನ ಶಿಲ್ಪಿ ಎಂಬ ನಾಮಾಂಕಿತವನ್ನು ಕೈಬಿಟ್ಟಿದ್ದು ವಿಕೃತ ನಡೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಮಾದವನ್ನು ಸರಿಪಡಿಸಿ ಮುದ್ರಿಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದು, ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.