<p><strong>ಬೆಳಗಾವಿ: ‘</strong>ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಕೇಳುವುದರೊಂದಿಗೆ ಬಿಜೆಪಿಯ ಶಕ್ತಿ ಕುಂದಿರುವುದು ಸಾಬೀತಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೇಳಿದ್ದಾರೆ. ಹಾಗಾದರೆ ಮುಳುಗುತ್ತಿರುವ ಹಡಗು ಯಾವುದು?’ ಎಂದರು.</p>.<p>‘ಬಿಜೆಪಿಯಲ್ಲಿ ಸ್ವಾಭಿಮಾನ, ಶಿಸ್ಸು ಇದ್ದರೆ ಬೆಳಗಾವಿಯಲ್ಲಿನ ಬೆಳವಣಿಗೆಗಳ ಬಗ್ಗೆ ಉತ್ತರ ಕೊಡಲಿ. ಬ್ಲಾಕ್ಮೇಲರ್ಗಳಿಗೆ ಹೆದರಿ ಸರ್ಕಾರ ನಡೆಸುತ್ತಿರುವುದು ನನಗಂತೂ ಸಂತೋಷ ತಂದಿದೆ’ ಎಂದು ಕುಟುಕಿದರು.</p>.<p>‘ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬಗ್ಗೆ ರಮೇಶ ಜಾರಕಿಹೊಳಿ ಥೂ ಎಂದೆಲ್ಲಾ ಮಾತನಾಡಿರುವುದು ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ. ನನ್ನ ಪಕ್ಷದಲ್ಲಾಗಿದ್ದರೆ ಅಂಥವರನ್ನು ಒಂದು ಗಂಟೆಯೂ ಇಟ್ಟುಕೊಳ್ಳುತ್ತಿರಲಿಲ್ಲ‘ ಎಂದು ಹೇಳಿದರು.</p>.<p><strong>ಬೆಂಬಲ ಕೇಳಿದರೆ ತಪ್ಪಿಲ್ಲ: ಕಾರಜೋಳ</strong></p>.<p>ವಿಜಯಪುರ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಬೆಂಬಲ ಕೇಳಿರುವುದರಲ್ಲಿ ತಪ್ಪಿಲ್ಲ. ಜೆಡಿಎಸ್ನವರು ಕಾಂಗ್ರೆಸ್ ಅನ್ನು ಯಾವಾಗಲೂ ಲೈಕ್ ಮಾಡುವುದಿಲ್ಲ. ಜೆಡಿಎಸ್ನವರು ಬಿಜೆಪಿಯನ್ನು ಹೆಚ್ಚು ಪ್ರೀತಿ ಮಾಡುತ್ತಾರೆ’ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಮರ್ಥಿಸಿಕೊಂಡರು.</p>.<p><strong>ಮಳವಳ್ಳಿ (ಮಂಡ್ಯ):</strong> ‘ಪಕ್ಷ ಸೂಚಿಸಿದರೆ ಮಂಡ್ಯದಲ್ಲಿ ಮತ್ತೆ ಸ್ಪರ್ಧಿಸುವೆ. ಜಿಲ್ಲೆಯ ಜನರ ಜೊತೆಗೆ ನಿರಂತರವಾಗಿ ಜತೆಗಿರುತ್ತೇನೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಕೇಳುವುದರೊಂದಿಗೆ ಬಿಜೆಪಿಯ ಶಕ್ತಿ ಕುಂದಿರುವುದು ಸಾಬೀತಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೇಳಿದ್ದಾರೆ. ಹಾಗಾದರೆ ಮುಳುಗುತ್ತಿರುವ ಹಡಗು ಯಾವುದು?’ ಎಂದರು.</p>.<p>‘ಬಿಜೆಪಿಯಲ್ಲಿ ಸ್ವಾಭಿಮಾನ, ಶಿಸ್ಸು ಇದ್ದರೆ ಬೆಳಗಾವಿಯಲ್ಲಿನ ಬೆಳವಣಿಗೆಗಳ ಬಗ್ಗೆ ಉತ್ತರ ಕೊಡಲಿ. ಬ್ಲಾಕ್ಮೇಲರ್ಗಳಿಗೆ ಹೆದರಿ ಸರ್ಕಾರ ನಡೆಸುತ್ತಿರುವುದು ನನಗಂತೂ ಸಂತೋಷ ತಂದಿದೆ’ ಎಂದು ಕುಟುಕಿದರು.</p>.<p>‘ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬಗ್ಗೆ ರಮೇಶ ಜಾರಕಿಹೊಳಿ ಥೂ ಎಂದೆಲ್ಲಾ ಮಾತನಾಡಿರುವುದು ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ. ನನ್ನ ಪಕ್ಷದಲ್ಲಾಗಿದ್ದರೆ ಅಂಥವರನ್ನು ಒಂದು ಗಂಟೆಯೂ ಇಟ್ಟುಕೊಳ್ಳುತ್ತಿರಲಿಲ್ಲ‘ ಎಂದು ಹೇಳಿದರು.</p>.<p><strong>ಬೆಂಬಲ ಕೇಳಿದರೆ ತಪ್ಪಿಲ್ಲ: ಕಾರಜೋಳ</strong></p>.<p>ವಿಜಯಪುರ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಬೆಂಬಲ ಕೇಳಿರುವುದರಲ್ಲಿ ತಪ್ಪಿಲ್ಲ. ಜೆಡಿಎಸ್ನವರು ಕಾಂಗ್ರೆಸ್ ಅನ್ನು ಯಾವಾಗಲೂ ಲೈಕ್ ಮಾಡುವುದಿಲ್ಲ. ಜೆಡಿಎಸ್ನವರು ಬಿಜೆಪಿಯನ್ನು ಹೆಚ್ಚು ಪ್ರೀತಿ ಮಾಡುತ್ತಾರೆ’ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಮರ್ಥಿಸಿಕೊಂಡರು.</p>.<p><strong>ಮಳವಳ್ಳಿ (ಮಂಡ್ಯ):</strong> ‘ಪಕ್ಷ ಸೂಚಿಸಿದರೆ ಮಂಡ್ಯದಲ್ಲಿ ಮತ್ತೆ ಸ್ಪರ್ಧಿಸುವೆ. ಜಿಲ್ಲೆಯ ಜನರ ಜೊತೆಗೆ ನಿರಂತರವಾಗಿ ಜತೆಗಿರುತ್ತೇನೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>