ಗ್ರಾಮ ಪಂಚಾಯ್ತಿಗಳಲ್ಲಿ ಮನೆ ನಿರ್ಮಾಣ ಸಾಧ್ಯವಾಗದ್ದರಿಂದ ಬಿಜೆಪಿ ಗ್ರಾಮ ಪಂಚಾಯ್ತಿ ಸದಸ್ಯರೇ ಮನೆಗಳಿಂದ ಹೊರಬರಲಿಕ್ಕೆ ನಾಚಿಕೆ ಪಟ್ಟುಕೊಳ್ಳುತ್ತಿದ್ದಾರೆ. ಬಡವರಿಗೆ ಮನೆ ನಿರ್ಮಿಸಿಕೊಡಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ರೈತರ ಪಂಪ್ಸೆಟ್ಗಳಿಗೆ ನೀಡಿರುವ ಉಚಿತ ವಿದ್ಯುತ್ ಸೌಲಭ್ಯವನ್ನೂ ಕಿತ್ತುಕೊಳ್ಳಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.