ಜೆಡಿಎಸ್ನ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿತ್ತು. ಶುಕ್ರವಾರ ಮೊದಲ ಸಭೆ ನಡೆಯಿತು. ಈ ಸಭೆಯ ಆರಂಭಕ್ಕೂ ಮೊದಲೇ ಬಿಜೆಪಿ ಸದಸ್ಯರು ‘ಸದನ ಸಮಿತಿ ರಚನೆಯ ವೈಖರಿ ಸರಿ ಇಲ್ಲ. ವಿಶ್ವಾಸವೂ ಇಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿ ಮರಿತಿಬ್ಬೇಗೌಡ ಅವರಿಗೆ ರಾಜೀನಾಮೆ ಸಲ್ಲಿಸಿದರು. ‘ಅಂದು ಗಲಾಟೆ ನಡೆದಾಗ ಈಗ ಸದನ ಸಮಿತಿ ಅಧ್ಯಕ್ಷರಾಗಿರುವ ಮರಿತಿಬ್ಬೇಗೌಡರೂ ಇದ್ದರು. ಹೀಗಾಗಿ, ನಿಷ್ಪಕ್ಷ ತನಿಖೆ ನಡೆಸಲು ಸಾಧ್ಯವೇ’ ಎಂದು ಸುದ್ದಿಗಾರರ ಜತೆ ಮಾತನಾಡಿ ಎಚ್.ವಿಶ್ವನಾಥ್ ಪ್ರಶ್ನಿಸಿದರು.