<p><strong>ಬೆಂಗಳೂರು:</strong> ದೆಹಲಿಗೆ ತುರ್ತು ಕಾರ್ಯದ ನಿಮಿತ್ತ ಬಂದಿದ್ದೇನೆಯೇ ಹೊರತು, ಪಕ್ಷದ ವರಿಷ್ಠರು ಬುಲಾವ್ ಮಾಡಿಲ್ಲ. ಭೇಟಿಗೆ ಸಮಯವನ್ನೂ ಪಡೆದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಪಕ್ಷದ ವರಿಷ್ಠರು ಕರೆಸಿ ಎಚ್ಚರಿಕೆ ನೀಡಿದ್ದಾರೆ ಎಂಬ ಸುದ್ದಿಗಳಿಗೆ ಫೇಸ್ಬುಕ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಭಾನುವಾರ ರಾತ್ರಿ ವಿಜಯಪುರದ ಸಿದ್ಧೇಶ್ವರ ಸಂಸ್ಥೆ ನಿರ್ಮಿಸಿರುವ ಭಾರತ ರತ್ನ ಅಟಲ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್ಇ ನೋಂದಣಿಯ ತುರ್ತು ಕೆಲಸ ಇದ್ದ ಕಾರಣ ದೆಹಲಿಗೆ ಬಂದಿದ್ದೆ ಎಂದು ಹೇಳಿದ್ದಾರೆ.</p>.<p>ನನಗೆ ಪಕ್ಷದ ಹೈಕಮಾಂಡ್ ಯಾವುದೇ ತುರ್ತು ಬುಲಾವ್ ಆಗಲಿ ಅಥವಾ ಸಮಯವನ್ನಾಗಲೀ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೂ ಸಮಯ ಕೇಳಿಲ್ಲ. ಆದರೆ ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಹೇಳಿಸಿ ರಾಜ್ಯದ ಜನರಲ್ಲಿ, ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದರು.</p>.<p>ನನ್ನ ಹೋರಾಟವು ನನ್ನ ಆದರ್ಶ ಗುರು ಅಟಲ್ ಬಿಹಾರಿ ವಾಜಪೇಯಿ ಮತ್ತು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ಕುಟುಂಬ ರಾಜಕಾರಣ ಮತ್ತು ಭ್ರಷ್ಟ ಮುಕ್ತ ಭಾರತದ ಭಾಗವಾಗಿದೆಯೇ ಹೊರತು ವೈಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ ಹಾಗೂ ಪಕ್ಷದ ವಿರುದ್ಧವೂ ಅಲ್ಲ ಎಂದು ಹೇಳಿದ್ದಾರೆ.</p>.<p>ಇಬ್ಬರು ಸಚಿವರು ಪತ್ರಿಕಾಗೋಷ್ಠಿ ನಡೆಸಿ ನನ್ನ ಬಗ್ಗೆ ಮತ್ತು ಸ್ವಾಮೀಜಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ಸೂಕ್ತ ಉತ್ತರವನ್ನು ಬಂದ ಮೇಲೆ ಕೊಡುತ್ತೇನೆ. ಹಿಂದೂ ಸಮಾಜದಲ್ಲಿನ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೆಹಲಿಗೆ ತುರ್ತು ಕಾರ್ಯದ ನಿಮಿತ್ತ ಬಂದಿದ್ದೇನೆಯೇ ಹೊರತು, ಪಕ್ಷದ ವರಿಷ್ಠರು ಬುಲಾವ್ ಮಾಡಿಲ್ಲ. ಭೇಟಿಗೆ ಸಮಯವನ್ನೂ ಪಡೆದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಪಕ್ಷದ ವರಿಷ್ಠರು ಕರೆಸಿ ಎಚ್ಚರಿಕೆ ನೀಡಿದ್ದಾರೆ ಎಂಬ ಸುದ್ದಿಗಳಿಗೆ ಫೇಸ್ಬುಕ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಭಾನುವಾರ ರಾತ್ರಿ ವಿಜಯಪುರದ ಸಿದ್ಧೇಶ್ವರ ಸಂಸ್ಥೆ ನಿರ್ಮಿಸಿರುವ ಭಾರತ ರತ್ನ ಅಟಲ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್ಇ ನೋಂದಣಿಯ ತುರ್ತು ಕೆಲಸ ಇದ್ದ ಕಾರಣ ದೆಹಲಿಗೆ ಬಂದಿದ್ದೆ ಎಂದು ಹೇಳಿದ್ದಾರೆ.</p>.<p>ನನಗೆ ಪಕ್ಷದ ಹೈಕಮಾಂಡ್ ಯಾವುದೇ ತುರ್ತು ಬುಲಾವ್ ಆಗಲಿ ಅಥವಾ ಸಮಯವನ್ನಾಗಲೀ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೂ ಸಮಯ ಕೇಳಿಲ್ಲ. ಆದರೆ ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಹೇಳಿಸಿ ರಾಜ್ಯದ ಜನರಲ್ಲಿ, ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದರು.</p>.<p>ನನ್ನ ಹೋರಾಟವು ನನ್ನ ಆದರ್ಶ ಗುರು ಅಟಲ್ ಬಿಹಾರಿ ವಾಜಪೇಯಿ ಮತ್ತು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ಕುಟುಂಬ ರಾಜಕಾರಣ ಮತ್ತು ಭ್ರಷ್ಟ ಮುಕ್ತ ಭಾರತದ ಭಾಗವಾಗಿದೆಯೇ ಹೊರತು ವೈಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ ಹಾಗೂ ಪಕ್ಷದ ವಿರುದ್ಧವೂ ಅಲ್ಲ ಎಂದು ಹೇಳಿದ್ದಾರೆ.</p>.<p>ಇಬ್ಬರು ಸಚಿವರು ಪತ್ರಿಕಾಗೋಷ್ಠಿ ನಡೆಸಿ ನನ್ನ ಬಗ್ಗೆ ಮತ್ತು ಸ್ವಾಮೀಜಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ಸೂಕ್ತ ಉತ್ತರವನ್ನು ಬಂದ ಮೇಲೆ ಕೊಡುತ್ತೇನೆ. ಹಿಂದೂ ಸಮಾಜದಲ್ಲಿನ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>