ಕಳೆದ ಒಂದು ವರ್ಷದಿಂದ ನಿರೀಕ್ಷಣಾ ಮಂದಿರಗಳೂ ಸೇರಿದಂತೆ ವಿವಿಧ ಹೆಸರಿನಲ್ಲಿ ಭವನಗಳ ನಿರ್ಮಾಣಕ್ಕೆ ತಡೆ ನೀಡಲಾಗಿದೆ. ಇವುಗಳನ್ನು ಪುನರಾರಂಭಿಸಬೇಕು ಎಂಬ ಒತ್ತಾಯ ಶಾಸಕರಿಂದ ಕೇಳಿ ಬಂದಿದೆ. ಹಲವು ವರ್ಷಗಳಿಂದ ನಿರ್ಮಾಣವಾಗಿರುವ ಭವನಗಳು ಅನುತ್ಪಾದಕ ಆಗಿರುವುದರಿಂದ, ಪುನಃ ಅಂತಹ ಭವನಗಳ ನಿರ್ಮಾಣದಿಂದ ಬೊಕ್ಕಸಕ್ಕೂ ಹೊರೆ ಆಗುತ್ತದೆ. ಅದರ ಬದಲಿಗೆ ರಸ್ತೆ, ಕುಡಿಯುವ ನೀರು, ಸೇತುವೆಗಳಂತಹ ಮೂಲ ಸೌಕರ್ಯಗಳಿಗೆ ಒತ್ತು ನೀಡುವ ಬಗ್ಗೆ ಮನವೊಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.