<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು 30 ಕ್ಕೂ ಹೆಚ್ಚು ಶಾಸಕರು ನಿರ್ಧರಿಸಿದ್ದಾರೆ.</p>.<p>ಸೋಮವಾರ ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಈ ಶಾಸಕರು ಯತ್ನಾಳ್ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸದೇ ಇದ್ದರೆ ವರಿಷ್ಠರಿಗೆ ದೂರು ನೀಡುತ್ತೇವೆ’ ಎಂದೂ ಹೇಳಿದ್ದಾರೆ.</p>.<p>ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಮುಖ್ಯಮಂತ್ರಿಯವರಿಗೆ ಮುಜುಗರ ತರುತ್ತಿದ್ದಾರೆ. ಇದು ವಿರೋಧಿಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆಯೂ ಶಾಸಕರು ಮುಖ್ಯಮಂತ್ರಿಯವರಿಗೆ ದೂರು ನೀಡಿದರು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಪಕ್ಷದ ಶಾಸಕರ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲಸಗಳು ಆಗುತ್ತಿಲ್ಲ ಎಂದು ದೂರಿದರು. ಈ ಬಗ್ಗೆ ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.</p>.<p>ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಬೆಳ್ಳಿಪ್ರಕಾಶ್, ಮಾಡಾಳ್ ವಿರೂಪಾಕ್ಷಪ್ಪ, ಪೂರ್ಣಿಮಾ ಶ್ರೀನಿವಾಸ್, ಆರಗ ಜ್ಞಾನೇಂದ್ರ, ಹರತಾಳ ಹಾಲಪ್ಪ, ಎಂ.ಪಿ.ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಮುಂತಾದವರು ಇದ್ದರೆಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು 30 ಕ್ಕೂ ಹೆಚ್ಚು ಶಾಸಕರು ನಿರ್ಧರಿಸಿದ್ದಾರೆ.</p>.<p>ಸೋಮವಾರ ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಈ ಶಾಸಕರು ಯತ್ನಾಳ್ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸದೇ ಇದ್ದರೆ ವರಿಷ್ಠರಿಗೆ ದೂರು ನೀಡುತ್ತೇವೆ’ ಎಂದೂ ಹೇಳಿದ್ದಾರೆ.</p>.<p>ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಮುಖ್ಯಮಂತ್ರಿಯವರಿಗೆ ಮುಜುಗರ ತರುತ್ತಿದ್ದಾರೆ. ಇದು ವಿರೋಧಿಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆಯೂ ಶಾಸಕರು ಮುಖ್ಯಮಂತ್ರಿಯವರಿಗೆ ದೂರು ನೀಡಿದರು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಪಕ್ಷದ ಶಾಸಕರ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲಸಗಳು ಆಗುತ್ತಿಲ್ಲ ಎಂದು ದೂರಿದರು. ಈ ಬಗ್ಗೆ ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.</p>.<p>ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಬೆಳ್ಳಿಪ್ರಕಾಶ್, ಮಾಡಾಳ್ ವಿರೂಪಾಕ್ಷಪ್ಪ, ಪೂರ್ಣಿಮಾ ಶ್ರೀನಿವಾಸ್, ಆರಗ ಜ್ಞಾನೇಂದ್ರ, ಹರತಾಳ ಹಾಲಪ್ಪ, ಎಂ.ಪಿ.ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಮುಂತಾದವರು ಇದ್ದರೆಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>