ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ‘ಲಭ್ಯವಿರುವ ಮಾಹಿತಿ ಪ್ರಕಾರ ಮೂವರನ್ನೂ ಸಚಿವರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಆದೇಶ ಹೊರಡಿಸಬೇಕು’ ಎಂದು ಕೋರಿದರು. ಆಗ ವಿಭಾಗೀಯ ಪೀಠ, ಮುಂದಿನ ಯಾವುದೇ ನಿರ್ಧಾರ ತನ್ನ ಆದೇಶದ ವ್ಯಾಪ್ತಿಗೆ ಒಳಪಟ್ಟಿರಲಿದೆ ಎಂದು ತಿಳಿಸಿತು.