<p><strong>ಬೆಂಗಳೂರು:</strong> ಕೋವಿಡ್ ಬಿಕ್ಕಟ್ಟು, ಮಳೆ ಅನಾಹುತದ ನಡುವೆಯೇ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಪ್ರಯತ್ನಿಸುತ್ತಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಸಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ತನಗೆ ನಗಣ್ಯ ಎಂಬುದಾಗಿ ತೋರಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರತಿ ಬಾರಿಯೂ ರಾಜ್ಯದಲ್ಲಿ ಮಳೆ, ಪ್ರವಾಹದಂತಹ ಸ್ಥಿತಿ ಇರುವಾಗ ಬಿಜೆಪಿ ನಾಯಕರು ಗೊಂದಲ ಸೃಷ್ಟಿಸುತ್ತಾರೆ. ಹಿಂದೆಯೂ ಹೀಗೆಯೇ ಆಗಿತ್ತು. ಆಡಳಿತ ಪಕ್ಷವು ಜನರ ಸಮಸ್ಯೆಗಿಂತಲೂ ನಾಯಕತ್ವ ಬದಲಾವಣೆಗೇ ಆದ್ಯತೆ ನೀಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಠಾಧೀಶರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಸಂದೇಶ ರವಾನೆಗೆ ಯತ್ನಿಸಿದ್ದಾರೆ. ಆ ಬಗ್ಗೆ ತಾವು ಲಘುವಾಗಿ ಮಾತನಾಡುವುದಿಲ್ಲ. ಮಠಾಧೀಶರ ವರ್ತನೆ ಸರಿಯೋ ಅಥವಾ ತಪ್ಪೋ ಎಂಬುದನ್ನು ನಿರ್ಧರಿಸುವುದನ್ನು ಜನರ ವಿವೇಚನೆಗೆ ಬಿಡುವುದಾಗಿ ಹೇಳಿದರು.</p>.<p>ಪಾದಯಾತ್ರೆಗೆ ಸಜ್ಜು: ಮೇಕೆದಾಟು, ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜೆಡಿಎಸ್ನಿಂದ ಪಾದಯಾತ್ರೆ ನಡೆಸಲಾಗುವುದು. ಈ ಮೂರೂ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದನ್ನು ಮನವರಿಕೆ ಮಾಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.</p>.<p>ಮೊದಲ ಹಂತದಲ್ಲಿ 26 ಜಿಲ್ಲೆಗಳ ಪಕ್ಷದ ಮುಖಂಡರ ಜತೆ ಸಭೆ ನಡೆಸಲಾಗಿದೆ. ಆಷಾಢ ಮಾಸ ಮುಗಿದ ಬಳಿಕ ಎರಡನೇ ಹಂತದ ಸಭೆಗಳನ್ನು ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಬಿಕ್ಕಟ್ಟು, ಮಳೆ ಅನಾಹುತದ ನಡುವೆಯೇ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಪ್ರಯತ್ನಿಸುತ್ತಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಸಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ತನಗೆ ನಗಣ್ಯ ಎಂಬುದಾಗಿ ತೋರಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರತಿ ಬಾರಿಯೂ ರಾಜ್ಯದಲ್ಲಿ ಮಳೆ, ಪ್ರವಾಹದಂತಹ ಸ್ಥಿತಿ ಇರುವಾಗ ಬಿಜೆಪಿ ನಾಯಕರು ಗೊಂದಲ ಸೃಷ್ಟಿಸುತ್ತಾರೆ. ಹಿಂದೆಯೂ ಹೀಗೆಯೇ ಆಗಿತ್ತು. ಆಡಳಿತ ಪಕ್ಷವು ಜನರ ಸಮಸ್ಯೆಗಿಂತಲೂ ನಾಯಕತ್ವ ಬದಲಾವಣೆಗೇ ಆದ್ಯತೆ ನೀಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಠಾಧೀಶರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಸಂದೇಶ ರವಾನೆಗೆ ಯತ್ನಿಸಿದ್ದಾರೆ. ಆ ಬಗ್ಗೆ ತಾವು ಲಘುವಾಗಿ ಮಾತನಾಡುವುದಿಲ್ಲ. ಮಠಾಧೀಶರ ವರ್ತನೆ ಸರಿಯೋ ಅಥವಾ ತಪ್ಪೋ ಎಂಬುದನ್ನು ನಿರ್ಧರಿಸುವುದನ್ನು ಜನರ ವಿವೇಚನೆಗೆ ಬಿಡುವುದಾಗಿ ಹೇಳಿದರು.</p>.<p>ಪಾದಯಾತ್ರೆಗೆ ಸಜ್ಜು: ಮೇಕೆದಾಟು, ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜೆಡಿಎಸ್ನಿಂದ ಪಾದಯಾತ್ರೆ ನಡೆಸಲಾಗುವುದು. ಈ ಮೂರೂ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದನ್ನು ಮನವರಿಕೆ ಮಾಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.</p>.<p>ಮೊದಲ ಹಂತದಲ್ಲಿ 26 ಜಿಲ್ಲೆಗಳ ಪಕ್ಷದ ಮುಖಂಡರ ಜತೆ ಸಭೆ ನಡೆಸಲಾಗಿದೆ. ಆಷಾಢ ಮಾಸ ಮುಗಿದ ಬಳಿಕ ಎರಡನೇ ಹಂತದ ಸಭೆಗಳನ್ನು ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>