ಬೆಂಗಳೂರು: ಕೋವಿಡ್ ಬಿಕ್ಕಟ್ಟು, ಮಳೆ ಅನಾಹುತದ ನಡುವೆಯೇ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಪ್ರಯತ್ನಿಸುತ್ತಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಸಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ತನಗೆ ನಗಣ್ಯ ಎಂಬುದಾಗಿ ತೋರಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.