ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್ ಜೋಡೊ ಯಾತ್ರೆಗೆ ಬಿಜೆಪಿ ಹೆದರುವುದಿಲ್ಲ: ಸಚಿವ ಅಶ್ವತ್ಥನಾರಾಯಣ

Last Updated 30 ಸೆಪ್ಟೆಂಬರ್ 2022, 10:04 IST
ಅಕ್ಷರ ಗಾತ್ರ

ಮೈಸೂರು: ‘ಕಾಂಗ್ರೆಸ್‌ನವರು ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಗೆ ಬಿಜೆಪಿ ಹೆದರುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ದೇಶ ಒಡೆಯುವ ಯಾತ್ರೆ ಅದಾಗಿದೆ. ಚೂರಾಗಿರುವ ಕಾಂಗ್ರೆಸ್ ಅನ್ನು ಅದನ್ನು ಜೋಡಿಸಿಕೊಳ್ಳಲಿ. ದೇಶ ಒಡೆದವರೇ ಈಗ ಜೋಡಿಸುತ್ತೇವೆ ಎನ್ನುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗುವುದಿಲ್ಲ. ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲು ಕಂಡಿದೆ’ ಎಂದರು.

‘ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿರುವುದು ಸರಿಯಲ್ಲ. ಡಿಕೆಶಿ ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದಾರೆ. ಅವರ ಗೂಂಡಾಗಿರಿಗೆಲ್ಲ ನಾವು ಜಗ್ಗುವುದಿಲ್ಲ. ಆಗಿರುವ ತಪ್ಪನ್ನು ಸರಿಪಡಿಸಿ ಎಂದು ಹೇಳಬೇಕು. ಅದನ್ನು ಬಿಟ್ಟು ಪ್ರಚೋದನೆ ನೀಡುವುದು ಸರಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT