ಸೆಪ್ಟೆಂಬರ್ 1 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ. ಜಿಲ್ಲಾ ಪ್ರಮುಖ ನಾಯಕರ ಸಭೆ, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಬೆಂಗಳೂರು, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.45 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಅಲ್ಲಿ ಅವರು ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ಬೆಂಗಳೂರಿಗೆ ವಾಪಸ್ ಬರಲಿದ್ದು, ಆ ಸಂದರ್ಭದಲ್ಲಿ ಪಕ್ಷದ ರಾಜ್ಯ ನಾಯಕರು ಅರುಣ್ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸೆ.3 ರ ಬೆಳಿಗ್ಗೆ ಅವರು ದೆಹಲಿಗೆ ಹಿಂತಿರುಗುವರು.