ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ ಕೃಷ್ಣಮಠಕ್ಕೆ ತೆರಳಿ, ಬಳಿಕ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿ ದ್ದಾರೆ. ಮಧ್ಯಾಹ್ನ ದ ನಂತರ ಬೈಂದೂರು ತಾಲ್ಲೂಕಿನ ಮುಳ್ಳಿಕಟ್ಟೆ ಮೈದಾನದಲ್ಲಿ ಸಾರ್ವಜನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.