ಮೈಸೂರು: ಜನರ ಬಾತ್ರೂಮ್ ಹಾಗೂ ಬೆಡ್ರೂಮ್ಗಳಿಗೆ ಪ್ರವೇಶಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಶನಿವಾರ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 'ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಮಾಧ್ಯಮದ ಮೇಲೆ ಮೋದಿ ಮತ್ತು ಅಮಿತ್ ಶಾ ದಾಳಿ ನಡೆಸುತ್ತಿದ್ದಾರೆ. ಅಕ್ರಮ ದೂರವಾಣಿ ಕದ್ದಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೊಡಗಿದೆ' ಎಂದು ಹರಿಹಾಯ್ದರು.
ಪೆಗಾಸಸ್ ಗೂಢಚಾರಿಕೆ ಕುರಿತು ಹೇಳಿಕೆ ನೀಡಿದ ಸುರ್ಜೇವಾಲಾ, 'ಜನರ ಸ್ನಾನಗೃಹ ಮತ್ತು ಮಲಗುವ ಕೋಣೆಯನ್ನು ಪ್ರವೇಶಿಸಲು ಬಿಜೆಪಿ ಯತ್ನಿಸುತ್ತಿದೆ' ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.