ಹೊಸಪೇಟೆ (ವಿಜಯನಗರ): ‘ವಿಧಾನ ಪರಿಷತ್ ಚುನಾವಣೆಗೆ ನನ್ನ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಜನರ ಹೆಸರಿನ ಪಟ್ಟಿ ಅಂತಿಮಗೊಳಿಸಿ, ಹೈಕಮಾಂಡ್ಗೆ ಶಿಫಾರಸು ಮಾಡಲಾಗಿದೆ. ನಾವು ಪಕ್ಷದ ಶಿಸ್ತಿನ ಶಿಪಾಯಿಗಳು. ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನವನ್ನು ನಾವು ಸಂತೋಷದಿಂದ ಸ್ವೀಕರಿಸುತ್ತೇವೆ’ ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದರು.