ಎಸ್ಸಿ ಮೋರ್ಚಾದ ಕಾರ್ಯದರ್ಶಿ ಎಚ್.ವೆಂಕಟೇಶ ದೊಡ್ಡೇರಿ, ‘ಸ್ವಾತಂತ್ರ್ಯ ಬಂದಾಗಿನಿಂದಲೂ ಆಳಿದ ಸರ್ಕಾರಗಳು ಸಮುದಾಯಕ್ಕೆ ಕೋಳಿ, ಹಸು, ಎಮ್ಮೆ ನೀಡುವಂತಹ ಯೋಜನೆಗಳನ್ನು ಹೆಚ್ಚಾಗಿ ಜಾರಿಗೆ ತಂದಿವೆ. ಸಮುದಾಯಕ್ಕೆ ತೆಲಂಗಾಣ ಮಾದರಿಯಲ್ಲಿ ಇಂಗ್ಲಿಷ್ ಮಾಧ್ಯಮದ ವಸತಿ ಶಾಲೆಗಳನ್ನು ತೆರೆಯುವುದು ಹಾಗೂ ನವೋದ್ಯಮಗಳಿಗೆ ಆರ್ಥಿಕ ನೆರವು ನೀಡುವಂತಹ ಯೋಜನೆಗಳು ಜಾರಿಯಾದರೆ, ಸಮುದಾಯದಿಂದಲೂ ಮಹಾನ್ ವ್ಯಕ್ತಿಗಳು ಹೊರಹೊಮ್ಮಲಿದ್ದಾರೆ’ ಎಂದರು.