ಹಾನಗಲ್ ಕ್ಷೇತ್ರಕ್ಕೆ ಶಿವಕುಮಾರ್ ಉದಾಸಿ ಅವರ ಪತ್ನಿಗೆ ಮತ್ತು ಸಿಂದಗಿಯಲ್ಲಿ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ, ಇವೆರಡೂ ಕ್ಷೇತ್ರಗಳು ಪಕ್ಷಕ್ಕೆ ಸುಲಭದ ತುತ್ತಲ್ಲ. ಮುಖ್ಯವಾಗಿ ಮುಸ್ಲಿಂ ಮತದಾರರ ಸಂಖ್ಯೆ ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಗೆಲುವಿಗೆ ಯಾವ ರಣತಂತ್ರ ಅನುಸರಿಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.