ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ‘ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಸೇರಿ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭಾತೃತ್ವ ಮತ್ತು ಜಾತ್ಯತೀತತೆಯ ಶತ್ರುಗಳಾದ ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದು ಉಲ್ಲೇಖಿಸಿದ್ದರು.