ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರ ಬರಬೇಕು: ರಾಹುಲ್

Last Updated 20 ಮಾರ್ಚ್ 2023, 12:39 IST
ಅಕ್ಷರ ಗಾತ್ರ

ಬೆಳಗಾವಿ: ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಕಾಂಗ್ರೆಸ್‌ ಯುವ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ್‌ ಜೋಡೋ ಯಾತ್ರೆಯಲ್ಲಿ ನನಗೆ ಹಲವು ಸತ್ಯಗಳು ತಿಳಿದಿವೆ. ನಫರತ್‌ ಕಿ ಮಾರ್ಕೆಟ್‌ ಮೇ ಮೊಹಬ್ಬತ್‌ ಕಿ ದುಕಾನ್‌ (ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಇಡುವುದಾಗಿ ಯುವಜನರು ಕೂಗಿ ಹೇಳಿದ್ದಾರೆ. ಇಡೀ ದೇಶದ ಜನ ದ್ವೇಷ ಮರೆತು, ಒಂದಾಗಿ ಬಾಳಲು ಇಚ್ಚಿಸಿದ್ದಾರೆ’ ಎಂದು ರಾಹುಲ್‌ ಗಾಂಧಿ ಹೇಳಿದರು.

‘ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು. ವಿಮಾನ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರತಿಯೊಂದು ಗುತ್ತಿಗೆಯೂ ಅದಾನಿ ಒಬ್ಬರಿಗೇ ಏಕೆ ಹೋಗುತ್ತಿವೆ ಎಂಬುದನ್ನು ಯುವಜನರ ಅರ್ಥ ಮಾಡಿಕೊಳ್ಳಬೇಕು’ ಎಂದೂ ಕರೆ ನೀಡಿದರು.

‘ಕರ್ನಾಟಕದ ಯುವಕರು ಎಲ್ಲಿ ಕರೆದರೂ, ಎಷ್ಟು ಬಾರಿ ಕರೆದರೂ ನಾನು ಬರುತ್ತೇನೆ. ಒಂದಾಗಿ ಚುನಾವಣೆ ಎದುರಿಸೋಣ. ಭ್ರಷ್ಟ ಸರ್ಕಾರ ಕಿತ್ತೆಸೆಯೋಣ’ ಎಂದರು.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT