<p><strong>ಬೆಳಗಾವಿ:</strong> ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p>.<p>ನಗರದಲ್ಲಿ ಸೋಮವಾರ ಕಾಂಗ್ರೆಸ್ ಯುವ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ್ ಜೋಡೋ ಯಾತ್ರೆಯಲ್ಲಿ ನನಗೆ ಹಲವು ಸತ್ಯಗಳು ತಿಳಿದಿವೆ. ನಫರತ್ ಕಿ ಮಾರ್ಕೆಟ್ ಮೇ ಮೊಹಬ್ಬತ್ ಕಿ ದುಕಾನ್ (ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಇಡುವುದಾಗಿ ಯುವಜನರು ಕೂಗಿ ಹೇಳಿದ್ದಾರೆ. ಇಡೀ ದೇಶದ ಜನ ದ್ವೇಷ ಮರೆತು, ಒಂದಾಗಿ ಬಾಳಲು ಇಚ್ಚಿಸಿದ್ದಾರೆ’ ಎಂದು ರಾಹುಲ್ ಗಾಂಧಿ ಹೇಳಿದರು.</p>.<p>ಇದನ್ನೂ ಓದಿ: <a href="https://www.prajavani.net/karnataka-news/rahul-gandhi-announces-rs-3000-unemployment-allowance-for-graduates-rs-1500-for-diploma-graduates-1025192.html" itemprop="url">ಪದವೀಧರರಿಗೆ ₹3,000, ಡಿಪ್ಲೊಮಾ ಪದವೀಧರರಿಗೆ ₹1,500 ನಿರುದ್ಯೋಗ ಭತ್ಯೆ: ರಾಹುಲ್ </a></p>.<p>‘ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು. ವಿಮಾನ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರತಿಯೊಂದು ಗುತ್ತಿಗೆಯೂ ಅದಾನಿ ಒಬ್ಬರಿಗೇ ಏಕೆ ಹೋಗುತ್ತಿವೆ ಎಂಬುದನ್ನು ಯುವಜನರ ಅರ್ಥ ಮಾಡಿಕೊಳ್ಳಬೇಕು’ ಎಂದೂ ಕರೆ ನೀಡಿದರು.</p>.<p>‘ಕರ್ನಾಟಕದ ಯುವಕರು ಎಲ್ಲಿ ಕರೆದರೂ, ಎಷ್ಟು ಬಾರಿ ಕರೆದರೂ ನಾನು ಬರುತ್ತೇನೆ. ಒಂದಾಗಿ ಚುನಾವಣೆ ಎದುರಿಸೋಣ. ಭ್ರಷ್ಟ ಸರ್ಕಾರ ಕಿತ್ತೆಸೆಯೋಣ’ ಎಂದರು.<br /><br />ಇದನ್ನೂ ಓದಿ: <a href="https://www.prajavani.net/karnataka-news/karnataka-elections-will-send-new-message-to-country-says-aicc-president-mallikarjun-kharge-at-1025206.html" itemprop="url">ದೇಶಕ್ಕೆ ಸಂದೇಶ ನೀಡಲಿದೆ ರಾಜ್ಯದ ಚುನಾವಣೆ: ಖರ್ಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p>.<p>ನಗರದಲ್ಲಿ ಸೋಮವಾರ ಕಾಂಗ್ರೆಸ್ ಯುವ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ್ ಜೋಡೋ ಯಾತ್ರೆಯಲ್ಲಿ ನನಗೆ ಹಲವು ಸತ್ಯಗಳು ತಿಳಿದಿವೆ. ನಫರತ್ ಕಿ ಮಾರ್ಕೆಟ್ ಮೇ ಮೊಹಬ್ಬತ್ ಕಿ ದುಕಾನ್ (ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಇಡುವುದಾಗಿ ಯುವಜನರು ಕೂಗಿ ಹೇಳಿದ್ದಾರೆ. ಇಡೀ ದೇಶದ ಜನ ದ್ವೇಷ ಮರೆತು, ಒಂದಾಗಿ ಬಾಳಲು ಇಚ್ಚಿಸಿದ್ದಾರೆ’ ಎಂದು ರಾಹುಲ್ ಗಾಂಧಿ ಹೇಳಿದರು.</p>.<p>ಇದನ್ನೂ ಓದಿ: <a href="https://www.prajavani.net/karnataka-news/rahul-gandhi-announces-rs-3000-unemployment-allowance-for-graduates-rs-1500-for-diploma-graduates-1025192.html" itemprop="url">ಪದವೀಧರರಿಗೆ ₹3,000, ಡಿಪ್ಲೊಮಾ ಪದವೀಧರರಿಗೆ ₹1,500 ನಿರುದ್ಯೋಗ ಭತ್ಯೆ: ರಾಹುಲ್ </a></p>.<p>‘ಈ ದೇಶ ಯಾರೊಬ್ಬರ ಸ್ವತ್ತಲ್ಲ. ಇದು ಪ್ರತಿಯೊಬ್ಬರ ಆಸ್ತಿ. ಕೇವಲ ಅದಾನಿಗೆ ದೇಶ ಸೀಮಿತವಾಗಿದೆ ಎಂಬ ಭ್ರಮೆಯಿಂದ ಬಿಜೆಪಿ ಹೊರಬರಬೇಕು. ವಿಮಾನ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರತಿಯೊಂದು ಗುತ್ತಿಗೆಯೂ ಅದಾನಿ ಒಬ್ಬರಿಗೇ ಏಕೆ ಹೋಗುತ್ತಿವೆ ಎಂಬುದನ್ನು ಯುವಜನರ ಅರ್ಥ ಮಾಡಿಕೊಳ್ಳಬೇಕು’ ಎಂದೂ ಕರೆ ನೀಡಿದರು.</p>.<p>‘ಕರ್ನಾಟಕದ ಯುವಕರು ಎಲ್ಲಿ ಕರೆದರೂ, ಎಷ್ಟು ಬಾರಿ ಕರೆದರೂ ನಾನು ಬರುತ್ತೇನೆ. ಒಂದಾಗಿ ಚುನಾವಣೆ ಎದುರಿಸೋಣ. ಭ್ರಷ್ಟ ಸರ್ಕಾರ ಕಿತ್ತೆಸೆಯೋಣ’ ಎಂದರು.<br /><br />ಇದನ್ನೂ ಓದಿ: <a href="https://www.prajavani.net/karnataka-news/karnataka-elections-will-send-new-message-to-country-says-aicc-president-mallikarjun-kharge-at-1025206.html" itemprop="url">ದೇಶಕ್ಕೆ ಸಂದೇಶ ನೀಡಲಿದೆ ರಾಜ್ಯದ ಚುನಾವಣೆ: ಖರ್ಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>