ಬೆಂಗಳೂರು: ದಲಿತ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಆ ವರ್ಗದ ಬಗ್ಗೆ ಕಿಂಚಿತ್ ಗೌರವವೂ ಇಲ್ಲ ಎಂದು ಬಿಜೆಪಿ ಟೀಕಿಸಿದೆ.
ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೊವನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಬಿಜೆಪಿ, ಪ್ರತಿಪಕ್ಷ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
‘ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಹೇಳಿಯೇ ಇಲ್ಲ ಎನ್ನುತ್ತಿದ್ದ ಬುರುಡೆ ರಾಮಯ್ಯ (ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ) ಅವರೇ, ಇಲ್ಲಿ ಭಾಷಣ ಮಾಡುತ್ತಿರುವುದು ಯಾರು? ನಿಮ್ಮ ಆಂಗಿಕ ಅಭಿವ್ಯಕ್ತಿಯಲ್ಲೇ ದಲಿತ ನಾಯಕರ ಬಗ್ಗೆ ಎಷ್ಟೊಂದು ಅಸಡ್ಡೆಯಿದೆ ಎಂಬುದು ಅರ್ಥವಾಗುತ್ತಿದೆ. ದಲಿತವಿರೋಧಿ ಸಿದ್ದರಾಮಯ್ಯ ಅವರು ದಲಿತ ಸಮುದಾಯದ ಬೇಷರತ್ ಕ್ಷಮೆ ಯಾಚಿಸಬೇಕು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಿದ್ದರಾಮಯ್ಯನವರೇ,
— BJP Karnataka (@BJP4Karnataka) November 6, 2021
ಮೀಸಲಾತಿ ಕೊಡಿಸಿದ್ದು ಕಾಂಗ್ರೆಸ್ಸೂ ಅಲ್ಲ, ನೀವೂ ಅಲ್ಲ. ಮೀಸಲು ಹಕ್ಕು ನೀಡಿದ್ದು ಸಂವಿಧಾನ.
ಆದರೆ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಸಂವಿಧಾನಕ್ಕೆ, ದಲಿತರಿಗೆ ಅನ್ಯಾಯ ಮಾಡಿದೆ.
ಆ ಐತಿಹಾಸಿಕ ಅಪಮಾನವನ್ನು ಮರೆಯಲು ಸಾಧ್ಯವೇ #ಬುರುಡೆರಾಮಯ್ಯ?#ದಲಿತವಿರೋಧಿಸಿದ್ದರಾಮಯ್ಯ
‘ಹೊಟ್ಟೆಪಾಡಿಗಾಗಿ ಹೋಗಿರುವುದು... ಸಿದ್ದರಾಮಯ್ಯ ಅವರೇ, ಎಷ್ಟು ಸರಳವಾಗಿ ನಿಮ್ಮ ಸಮಕಾಲೀನ ದಲಿತ ನಾಯಕರನ್ನು ತುಚ್ಛೀಕರಿಸಿಬಿಟ್ಟಿರಿ. ನಿಮ್ಮ ಈ ದುರಂಹಕಾರದ ನಡೆಯನ್ನು ರಾಜ್ಯದ ಸ್ವಾಭಿಮಾನಿ ದಲಿತ ಸಮುದಾಯ ಎಂದಿಗೂ ಖಂಡಿತ ಕ್ಷಮಿಸಲಾರದು. ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ತಮ್ಮ ಸಮುದಾಯದ ಜನರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೆ, ದಲಿತ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡ ಸಿದ್ದರಾಮಯ್ಯ ಅವರಿಗೆ ದಲಿತ ವರ್ಗದ ಬಗ್ಗೆ ಕಿಂಚಿತ್ ಗೌರವವೂ ಇಲ್ಲ’ ಎಂದು ಬಿಜೆಪಿ ಟೀಕಿಸಿದೆ.
‘ಹತ್ತಿದ ಏಣಿ ಒದೆಯುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ದ್ರೋಹ ಮಾಡಿದಿರಿ. ಹೆಗಲುಕೊಟ್ಟ ಪರಮೇಶ್ವರ್ ಅವರ ಬೆನ್ನಿಗೆ ಚೂರಿ ಹಾಕಿದಿರಿ. ಜೊತೆಯಾಗಿ ಬಂದ ಮಹದೇವಪ್ಪ ಅವರನ್ನು ದೂರವಿಟ್ಟಿರಿ. ಈಗ ಜನತಾ ಪರಿವಾರದ ದಲಿತ ನಾಯಕರನ್ನೇ ನಿಂದಿಸುತ್ತಿದ್ದೀರಿ’ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.
ಹತ್ತಿದ ಏಣಿ ಒದೆಯುವುದರಲ್ಲಿ #ಬುರುಡೆರಾಮಯ್ಯ ನಿಸ್ಸೀಮರು.
— BJP Karnataka (@BJP4Karnataka) November 6, 2021
√ ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ದ್ರೋಹ ಮಾಡಿದಿರಿ.
√ ಹೆಗಲುಕೊಟ್ಟ ಪರಮೇಶ್ವರ್ ಅವರ ಬೆನ್ನಿಗೆ ಚೂರಿ ಹಾಕಿದಿರಿ.
√ ಜೊತೆಯಾಗಿ ಬಂದ ಮಹದೇವಪ್ಪ ಅವರನ್ನು ದೂರವಿಟ್ಟಿರಿ.
√ ಈಗ ಜನತಾ ಪರಿವಾರದ ದಲಿತ ನಾಯಕರನ್ನೇ ನಿಂದಿಸುತ್ತಿದ್ದೀರಿ.#ದಲಿತವಿರೋಧಿಸಿದ್ದರಾಮಯ್ಯ
ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರಿದ್ದಾರೆ.
— BJP Karnataka (@BJP4Karnataka) November 6, 2021
ಅವರೆಲ್ಲರೂ ತಮ್ಮ ಸಮುದಾಯದ ಜನರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಆದರೆ, ದಲಿತ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡ #ಬುರುಡೆರಾಮಯ್ಯ ಅವರಿಗೆ ದಲಿತ ವರ್ಗದ ಬಗ್ಗೆ ಕಿಂಚಿತ್ ಗೌರವವೂ ಇಲ್ಲ.#ದಲಿತವಿರೋಧಿಸಿದ್ದರಾಮಯ್ಯ
ಹೊಟ್ಟೆಪಾಡಿಗಾಗಿ ಹೋಗಿರುವುದು....#ಬುರುಡೆರಾಮಯ್ಯ ಅವರೇ, ಎಷ್ಟು ಸರಳವಾಗಿ ನಿಮ್ಮ ಸಮಕಾಲೀನ ದಲಿತ ನಾಯಕರನ್ನು ತುಚ್ಛೀಕರಿಸಿಬಿಟ್ಟಿರಿ.
— BJP Karnataka (@BJP4Karnataka) November 6, 2021
ನಿಮ್ಮ ಈ ದುರಂಹಕಾರದ ನಡೆಯನ್ನು ರಾಜ್ಯದ ಸ್ವಾಭಿಮಾನಿ ದಲಿತ ಸಮುದಾಯ ಎಂದಿಗೂ ಖಂಡಿತ ಕ್ಷಮಿಸಲಾರದು.#ದಲಿತವಿರೋಧಿಸಿದ್ದರಾಮಯ್ಯ
ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಹೇಳಿಯೇ ಇಲ್ಲ ಎನ್ನುತ್ತಿದ್ದ #ಬುರುಡೆರಾಮಯ್ಯ ಅವರೇ, ಇಲ್ಲಿ ಭಾಷಣ ಮಾಡುತ್ತಿರುದ್ಯಾರು?
— BJP Karnataka (@BJP4Karnataka) November 6, 2021
ನಿಮ್ಮ ಆಂಗಿಕ ಅಭಿವ್ಯಕ್ತಿಯಲ್ಲೇ ದಲಿತ ನಾಯಕರ ಬಗ್ಗೆ ಎಷ್ಟೊಂದು ಅಸಡ್ಡೆಯಿದೆ ಎಂಬುದು ಅರ್ಥವಾಗುತ್ತಿದೆ. #ದಲಿತವಿರೋಧಿಸಿದ್ದರಾಮಯ್ಯ ಅವರು ದಲಿತ ಸಮುದಾಯದ ಬೇಷರತ್ ಕ್ಷಮೆ ಯಾಚಿಸಬೇಕು. pic.twitter.com/VsodUgmwcj
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.