ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೇಳಿಕೊಟ್ಟಿದ್ದನ್ನು ಹಾದಿ-ಬೀದಿಯಲ್ಲಿ ಹೇಳುವಂತವರಾಗಬೇಡಿ. ಇದು ನಿಮ್ಮ ಅಪ್ರಬುದ್ದತೆಯನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಶೇ 40 ರ ಲಂಚದ ಸರ್ಕಾರ ಎಂಬ ರಾಹುಲ್ ಟೀಕೆಯನ್ನು ಖಂಡಿಸಿರುವ ಅವರು, ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ಸುಖಾ ಸುಮ್ಮನೆ, ಪ್ರಚಾರಕ್ಕಾಗಿ ಆರೋಪ ಮಾಡಬೇಡಿ ಎಂದಿದ್ದಾರೆ.