ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌: ಪಕ್ಷದ ನಿರ್ಧಾರಕ್ಕೆ ಬದ್ಧ–ವಿಜಯೇಂದ್ರ

Last Updated 26 ಫೆಬ್ರುವರಿ 2023, 12:46 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

‘ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ಸಂಘಟನೆಯ ಕೆಲಸ ಕೂಡ ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆ. ಅದೇ ರೀತಿ ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ವಿವಿಧ ಮೋರ್ಚಾಗಳ ಜವಾಬ್ದಾರಿ ವಹಿಸಿಕೊಂಡು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಹಜವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಚರ್ಚೆಗಳು ಆಗುತ್ತಿವೆ. ಇನ್ನೊಂದು ಕಡೆ ಶಿಕಾರಿಪುರ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮ ಕೊಟ್ಟಂತಹ ಕ್ಷೇತ್ರ. ಆದ್ದರಿಂದ ಶಿಕಾರಿಪುರದ ಕೆಲವು ಹಿರಿಯರು ಇಲ್ಲಿಯೇ ಸ್ಪರ್ಧಿಸಬೇಕು ಎಂದಾಗ ನನ್ನ ಮೇಲೆ ನಂಬಿಕೆ ಇಟ್ಟು ಯಡಿಯೂರಪ್ಪ ಅವರು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದರು.

‘ಬಿಜೆಪಿ ರಾಷ್ಟ್ರೀಯ ಪಕ್ಷ. ಅಂತಿಮವಾಗಿ ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತದೆಯೊ ಅದಕ್ಕೆ ಬದ್ಧ. ಪಕ್ಷದ ನಿರ್ಧಾರ ಕಾದು ನೋಡುತ್ತಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT