‘ಸಹಜವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಚರ್ಚೆಗಳು ಆಗುತ್ತಿವೆ. ಇನ್ನೊಂದು ಕಡೆ ಶಿಕಾರಿಪುರ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮ ಕೊಟ್ಟಂತಹ ಕ್ಷೇತ್ರ. ಆದ್ದರಿಂದ ಶಿಕಾರಿಪುರದ ಕೆಲವು ಹಿರಿಯರು ಇಲ್ಲಿಯೇ ಸ್ಪರ್ಧಿಸಬೇಕು ಎಂದಾಗ ನನ್ನ ಮೇಲೆ ನಂಬಿಕೆ ಇಟ್ಟು ಯಡಿಯೂರಪ್ಪ ಅವರು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದರು.