ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಸಚಿವೆ ನಿರ್ಮಲಾ ಸೀತಾರಾಮನ್​, ಜಗ್ಗೇಶ್‌ಗೆ ಬಿಜೆಪಿ ಟಿಕೆಟ್

Last Updated 29 ಮೇ 2022, 14:16 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್‌ಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ಘೋಷಣೆ ಮಾಡಿದೆ.

ರಾಜ್ಯವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯು ಅಂತಿಮವಾಗಿ ಟಿಕೆಟ್‌ ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಟಿಕೆಟ್‌ ನೀಡಿರುವ ಆದೇಶ ಹೊರಡಿಸಿದ್ದಾರೆ.

ನಿರ್ಮಲ ಕುಮಾರ್ ಸುರಾನಾ, ಲೆಹರ್ ಸಿಂಗ್‌, ಕೆ.ಸಿ. ರಾಮಮೂರ್ತಿ ಅವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಆದರೆ ಇವರಿಗೆ ಟಿಕೆಟ್‌ ನೀಡಿಲ್ಲ.

ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಒಕ್ಕಲಿಗ ಸಮುದಾಯವನ್ನು ಪರಿಗಣಿಸಿ ಜಗ್ಗೇಶ್‌ಗೆ ಟಿಕೆಟ್‌ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿವಿಧ ರಾಜ್ಯಗಳಿಂದ ಖಾಲಿ ಆಗಲಿರುವ ಒಟ್ಟು 16 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದ್ದು, ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ಮಹಾರಾಷ್ಟ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT