ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಭಾನುವಾರ ಸರಣಿ ಸಭೆ

Last Updated 4 ಜೂನ್ 2022, 16:28 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ಪ್ರಚಾರ ಅಭಿಯಾನ, ಪಕ್ಷ ಸಂಘಟನೆ, ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆ ಕುರಿತಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಭಾನುವಾರವ ಸರಣಿ ಸಭೆಗಳು ನಡೆಯಲಿವೆ.

ಪಕ್ಷದ ರಾಜ್ಯ ಘಟಕದ ಕಚೇರಿ ಜಗನ್ನಾಥ ಭವನಕ್ಕೆ ಭಾನುವಾರ ಬೆಳಿಗ್ಗೆಯೇ ಬರಲಿರುವ ಅರುಣ್‌ ಸಿಂಗ್‌, ವಿವಿಧ ಜಿಲ್ಲಾ ಘಟಕಗಳ ಪ್ರಮುಖರ ಜತೆ ಆನ್‌ಲೈನ್‌ ಮೂಲಕ ಸಭೆ ನಡೆಸುವರು. ಕೇಂದ್ರ ಸರ್ಕಾರದ ಸಾಧನೆಗಳ ಕುರಿತ ಪ್ರಚಾರ ಅಭಿಯಾನದ ಪ್ರಗತಿ ಬಗ್ಗೆ ಮಾಹಿತಿ ಪಡೆಯುವರು. ಬಳಿಕ ವಿವಿಧ ಘಟಕಗಳ ಪ್ರಮುಖರ ಜತೆಗೂ ಆನ್‌ಲೈನ್‌ ಮೂಲಕ ಸಭೆ ನಡೆಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಅಧಿಕೃತವಾಗಿ ಯಾವುದೇ ಸಭೆ ನಿಗದಿಯಾಗಿಲ್ಲ. ಆದರೆ, ಸಚಿವರು ಮತ್ತು ಶಾಸಕರ ಜತೆ ಅನೌಪಚಾರಿಕವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT