ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೇಂದ್ರ ವಿರುದ್ಧ ಆರೋಪ; ಕೆಪಿಸಿಸಿ ವಕ್ತಾರನ ವಿರುದ್ಧ ಎಫ್‌ಐಆರ್‌

Last Updated 4 ಸೆಪ್ಟೆಂಬರ್ 2020, 21:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಸುಳ್ಳು ಆರೋಪ ಮಾಡಿರುವ ಕೆಪಿಸಿಸಿ ವಕ್ತಾರ್ ಎಂ. ಲಕ್ಷ್ಮಣ, ಬಿಜೆಪಿ ಶಾಸಕರ ನಕಲಿ ಸಹಿ ಬಳಸಿ ಖೊಟ್ಟಿ ದಾಖಲೆ ಬಿಡುಗಡೆ ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲ ಜಿ. ದೇವೇಗೌಡ ಎಂಬುವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

‘ದೇವೇಗೌಡ ಅವರು ನೀಡಿರುವ ದೂರು ಆಧರಿಸಿ ಆರೋಪಿ ಲಕ್ಷ್ಮಣ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆ. 26ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಲಕ್ಷ್ಮಣ, ‘ಸೂಪರ್ ಸಿಎಂ ಬಿ.ವೈ. ವಿಜಯೇಂದ್ರ ದರ್ಬಾರ್’ ಎಂಬ ದಾಖಲೆ ಬಿಡುಗಡೆ ಮಾಡಿದ್ದರು. ಅದರಲ್ಲಿ ಬಿಜೆಪಿ ಶಾಸಕರು ಸಹಿ ಮಾಡಿ, ಹೈಕಮಾಂಡ್‌ಗೆ ದೂರು ನೀಡಿರುವುದಾಗಿ ಹೇಳಿದ್ದರು. ಇದು ಸುಳ್ಳು ದಾಖಲೆ ಎಂಬುದಾಗಿ ದೇವೇಗೌಡ ದೂರಿದ್ದಾರೆ.’

’ಸುಳ್ಳು ದಾಖಲೆ ಮೂಲಕ ವಿಜಯೇಂದ್ರ ಮತ್ತು ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ಉಂಟು ಮಾಡಲಾಗಿದೆ. ಆರೋಪಿ ಲಕ್ಷ್ಮಣ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ದೇವೇಗೌಡ ಆಗ್ರಹಿಸಿದ್ದಾರೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT