<p><strong>ಬೆಂಗಳೂರು: </strong>‘ಬಡವರು, ಶೋಷಿತರಿಗೆ ಆಸರೆಯಾಗಿರುವ ಮೀಸಲಾತಿ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳ ನಾಶದ ಗುರಿಯೊಂದಿಗೆ ಬಿಜೆಪಿ ರಾಜಕಾರಣ ಮಾಡುತ್ತಿದೆ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಾತಿಯ ವಿರುದ್ಧ ಇದೆ. ಈ ಕಾರಣಕ್ಕಾಗಿಯೇ ಸರ್ಕಾರಿ ವಲಯದ 26 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ’ ಎಂದು ಆರೋಪಿಸಿದರು.</p>.<p>ಬಿಜೆಪಿ ಸರ್ಕಾರದ ಸ್ವಂತದ ಸಾಧನೆ ಏನೂ ಇಲ್ಲ. ಕಾಂಗ್ರೆಸ್ ಅವಧಿಯಲ್ಲಿನ ಯೋಜನೆಗಳ ಹೆಸರು ಬದಲಿಸಿದ್ದೇ ಸಾಧನೆ. ಕಾಂಗ್ರೆಸ್ ಆಡಳಿತದಲ್ಲಿ ಕಟ್ಟಿ ಬೆಳೆಸಿದ್ದ ಬಿಎಸ್ಎನ್ಎಲ್ ಮತ್ತಿತರ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿದ್ದೇ ಸಾಧನೆ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ‘ರಾಜೀವ್ ಗಾಂಧಿಯವರ ದೂರದೃಷ್ಟಿಯ ಫಲವಾಗಿ ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆದಿದೆ. ಈಗಿನ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ದ್ವೇಷ ಹರಡುವುದಕ್ಕೆ ಸೀಮಿತವಾಗಿದೆ’ ಎಂದರು.</p>.<p>ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ದಿನೇಶ್ ಗುಂಡೂರಾವ್, ಮೇಲ್ಮನೆ ಸದಸ್ಯ ಅಲ್ಲಂ ವೀರಭದ್ರಪ್ಪ, ಮುಖಂಡರಾದ ಎಚ್.ಆಂಜನೇಯ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಬಡವರು, ಶೋಷಿತರಿಗೆ ಆಸರೆಯಾಗಿರುವ ಮೀಸಲಾತಿ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳ ನಾಶದ ಗುರಿಯೊಂದಿಗೆ ಬಿಜೆಪಿ ರಾಜಕಾರಣ ಮಾಡುತ್ತಿದೆ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಾತಿಯ ವಿರುದ್ಧ ಇದೆ. ಈ ಕಾರಣಕ್ಕಾಗಿಯೇ ಸರ್ಕಾರಿ ವಲಯದ 26 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ’ ಎಂದು ಆರೋಪಿಸಿದರು.</p>.<p>ಬಿಜೆಪಿ ಸರ್ಕಾರದ ಸ್ವಂತದ ಸಾಧನೆ ಏನೂ ಇಲ್ಲ. ಕಾಂಗ್ರೆಸ್ ಅವಧಿಯಲ್ಲಿನ ಯೋಜನೆಗಳ ಹೆಸರು ಬದಲಿಸಿದ್ದೇ ಸಾಧನೆ. ಕಾಂಗ್ರೆಸ್ ಆಡಳಿತದಲ್ಲಿ ಕಟ್ಟಿ ಬೆಳೆಸಿದ್ದ ಬಿಎಸ್ಎನ್ಎಲ್ ಮತ್ತಿತರ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿದ್ದೇ ಸಾಧನೆ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ‘ರಾಜೀವ್ ಗಾಂಧಿಯವರ ದೂರದೃಷ್ಟಿಯ ಫಲವಾಗಿ ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆದಿದೆ. ಈಗಿನ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ದ್ವೇಷ ಹರಡುವುದಕ್ಕೆ ಸೀಮಿತವಾಗಿದೆ’ ಎಂದರು.</p>.<p>ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ದಿನೇಶ್ ಗುಂಡೂರಾವ್, ಮೇಲ್ಮನೆ ಸದಸ್ಯ ಅಲ್ಲಂ ವೀರಭದ್ರಪ್ಪ, ಮುಖಂಡರಾದ ಎಚ್.ಆಂಜನೇಯ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>