ರಾಯಚೂರಿನಲ್ಲಿ ವಿಮಾನ ನಿಲ್ದಾಣ, ಏತ ನೀರಾವರಿ, ವರ್ತುಲ ರಸ್ತೆ, ಭಾರತಮಾಲಾ, ಜವಳಿ ಪಾರ್ಕ್, ಹೊಸ ಕೈಗಾರಿಕಾ ವಲಯ, ರಾಯಚೂರು ಮಹಾನಗರ ಪಾಲಿಕೆ ಆಗಲಿದೆ. ನಂಜುಂಡಪ್ಪ ವರದಿ ಜಾರಿಗಾಗಿ ಸಾವಿರಾರು ಕೋಟಿ ಅನುದಾನ ಕೊಡಲಾಗಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕಾಂಗ್ರೆಸ್ ಅವಮಾನ, ಅಪಮಾನ ಹಾಗೂ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ನಿರಂತರ ಸೋಲಿನಿಂದ ಕಂಗೆಟ್ಟಿದೆ ಎಂದರು.