ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಗಲಭೆ ನಡೆಯುವಾಗ ಮುಸ್ಲಿಮರ ಮೇಲೆ ಬಿಜೆಪಿಗೆ ಇಲ್ಲದ ಪ್ರೀತಿ ಇದೀಗ ಬಂದಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ರಾಜ್ಯದಲ್ಲಿ ನಡೆದ ಅನೇಕ ಕೋಮು ಗಲಾಟೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ! ಎಂದು ಟ್ವಿಟರ್ನಲ್ಲಿ ಟೀಕಿಸಿದೆ.
ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಬೆಂಕಿ ಹಚ್ಚುವಾಗ ಇಲ್ಲದ ಪ್ರೀತಿ ಈಗ ಬಂದಿದೆ! ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ!