ಹರಿಪ್ರಸಾದ್ ಅವರು ಈಡಿಗ ಸಮುದಾಯಕ್ಕೆ ಸೇರಿದವರು. ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ ಕಾಂಗ್ರೆಸ್, ಇದೀಗ ಹಿಂದುಳಿದ ಸಮುದಾಯದ ಮೇಲೆ ತನ್ನ ಹಿಡಿತ ಬಲಪಡಿಸುವ ಉದ್ದೇಶದಿಂದ ಆ ವರ್ಗದ ನಾಯಕನಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ನೀಡಿದೆ ಎಂದು ಹೇಳಲಾಗುತ್ತಿದೆ.