ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಗಡಿ ತಕರಾರಿನ ಹಿಂದೆ, ಬೆಳಗಾವಿ ಅಧಿವೇಶನದಲ್ಲಿ ಬೇರೆ ವಿಷಯಗಳು ಚರ್ಚೆಯಾಗದಂತೆ ತಡೆಯುವ ಹುನ್ನಾರವಿದೆ. ಮಹಾರಾಷ್ಟ್ರದ ಸಚಿವರು ಕರ್ನಾಟಕಕ್ಕೆ ಬಂದು ಹೇಳಿಕೆ ನೀಡುತ್ತಲೇ ಇದ್ದಾರೆ. ಕಳೆದ ಬೆಳಗಾವಿ ಅಧಿವೇಶನ ಸಮಯದಲ್ಲಿ ಮಹಾರಾಷ್ಟ್ರದ ಗೃಹ ಸಚಿವರು ಬೆಳಗಾವಿಯಲ್ಲಿ ಉಳಿದುಕೊಂಡಿದ್ದರು. ಆದರೆ, ನಮ್ಮ ಗೃಹ ಸಚಿವರಿಗೆ ಈ ಬಗ್ಗೆ ಗೊತ್ತೇ ಇರಲಿಲ್ಲ’ ಎಂದರು.