‘ಘಟನೆ ಬಗ್ಗೆ ಹೇಳಿಕೆ ನೀಡಿರುವ ಗೃಹ ಸಚಿವರು, ಚಂದ್ರು ಎಂಬ ದಲಿತ ಹುಡುಗನನ್ನು ಗುಂಪೊಂದು ಅಡ್ಡಗಟ್ಟಿ ಉರ್ದು ಮಾತನಾಡಲು ಒತ್ತಾಯಿಸಿದೆ. ಆತನಿಗೆ ಉರ್ದು ಬರುತ್ತಿರಲಿಲ್ಲವೆಂದು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಸ್ವಯಂ ಘೋಷಿತ ತೀರ್ಪು ನೀಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಆರಗ ಜ್ಞಾನೇಂದ್ರ ಅವರು ಜ್ಞಾನವೇ ಇಲ್ಲದೆ ಈ ಹೇಳಿಕೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.