‘ಟಿಕಾಯತ್ ಮೇಲಾದ ದಾಳಿ, ಇಡೀ ರೈತ ಸಮುದಾಯ ಮೇಲಾದ ದಾಳಿ ಆಗಿದೆ. ಇದನ್ನು ಖಂಡಿಸಿ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಪ್ಪು ಪಟ್ಟಿ ಧರಿಸಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡುತ್ತಿವೆ’ ಎಂದು ರೈತ ಮುಖಂಡರಾದ ಕೆ.ಟಿ. ಗಂಗಾಧರ, ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದ್ದಾರೆ.