‘ಕೋವಿಡ್ ನಿಯಂತ್ರಣ ಹಾಗೂ ಅನಿಯಂತ್ರಿತ ಸ್ಟೆರಾಯ್ಡ್ ಬಳಕೆಗೆ ಕಡಿವಾಣ ಹಾಕಿರುವುದರಿಂದ ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ಇಳಿಕೆ ಕಂಡಿವೆ. ಆದರೆ, ಸೋಂಕಿತರಲ್ಲಿ ಕೆಲವರು ತಡವಾಗಿ ಆಸ್ಪತ್ರೆಗೆ ಬರುತ್ತಿದ್ದಾರೆ. ಸೋಂಕು ಮಿದುಳಿಗೆ ಹರಡಿದಲ್ಲಿ ಉಳಿಸಿಕೊಳ್ಳುವುದು ಕಷ್ಟ. ಹಾಗಾಗಿ, ಲಕ್ಷಣಗಳು ಗೋಚರಿಸಿದ ಕೂಡಲೇ ಆಸ್ಪತ್ರೆಗೆ ತೆರಳಿ, ತಪಾಸಣೆ ಮಾಡಿಸಿಕೊಳ್ಳಬೇಕು. ಸದ್ಯ ಆಸ್ಪತ್ರೆಗಳಲ್ಲಿ ಹಾಸಿಗೆ ಹಾಗೂ ಔಷಧದ ಸಮಸ್ಯೆಯಿಲ್ಲ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.