<p><strong>ಬೆಂಗಳೂರು:</strong> ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾದವರ ಚಿಕಿತ್ಸೆಗೆ ಔಷಧ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಚುಚ್ಚುಮದ್ದು ಕೊರತೆ ಇದೆ ಎಂದು ವಕೀಲ ಪಿ. ರವೀಂದ್ರ ಅವರು ಬರೆದಿದ್ದ ಪತ್ರ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.</p>.<p>‘ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾದವರ ಸಂಖ್ಯೆ ಎಷ್ಟು, ಚಿಕಿತ್ಸೆಗೆ ಲಭ್ಯ ಇರುವ ಔಷಧದ ಪ್ರಮಾಣ ಎಷ್ಟು’ ಎಂಬ ವಿವರ ಸಲ್ಲಿಸುವಂತೆ ಪೀಠ ಸೂಚಿಸಿತು. ‘ರಾಜ್ಯದಲ್ಲಿ ಚುಚ್ಚುಮದ್ದು ಕೊರತೆ ಇದೆ. ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೊರತೆ ಸರಿದೂಗಿಸಲು ಪ್ರಯತ್ನಿಸುತ್ತಿದೆ’ ಎಂದು ಅಡ್ವೊಕೇಟ್ ಜನರಲ್ ಮಾಹಿತಿ ನೀಡಿದರು.</p>.<p>‘ಕಪ್ಪು ಶಿಲೀಂದ್ರ ಚಿಕಿತ್ಸೆಗೆ ಔಷಧ ಭಾರತದಲ್ಲಿ ತಯಾರಾಗದ ಕಾರಣ ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಿದೆ’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.</p>.<p>ಕಪ್ಪು ಶಿಲೀಂದ್ರ ಸೋಂಕಿನಿಂದ ಎಷ್ಟು ಜನರ ಬಳಲುತ್ತಿದ್ದಾರೆ ಎಂಬುದರ ಕುರಿತು ಜಿಲ್ಲಾವಾರು ಮಾಹಿತಿ ನೀಡುವಂತೆ ತಿಳಿಸಿದ ಪೀಠ, ‘ಔಷಧ ಕೊರತೆಯನ್ನು ಕೂಡಲೇ ಸರಿದೂಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾದವರ ಚಿಕಿತ್ಸೆಗೆ ಔಷಧ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಚುಚ್ಚುಮದ್ದು ಕೊರತೆ ಇದೆ ಎಂದು ವಕೀಲ ಪಿ. ರವೀಂದ್ರ ಅವರು ಬರೆದಿದ್ದ ಪತ್ರ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.</p>.<p>‘ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾದವರ ಸಂಖ್ಯೆ ಎಷ್ಟು, ಚಿಕಿತ್ಸೆಗೆ ಲಭ್ಯ ಇರುವ ಔಷಧದ ಪ್ರಮಾಣ ಎಷ್ಟು’ ಎಂಬ ವಿವರ ಸಲ್ಲಿಸುವಂತೆ ಪೀಠ ಸೂಚಿಸಿತು. ‘ರಾಜ್ಯದಲ್ಲಿ ಚುಚ್ಚುಮದ್ದು ಕೊರತೆ ಇದೆ. ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೊರತೆ ಸರಿದೂಗಿಸಲು ಪ್ರಯತ್ನಿಸುತ್ತಿದೆ’ ಎಂದು ಅಡ್ವೊಕೇಟ್ ಜನರಲ್ ಮಾಹಿತಿ ನೀಡಿದರು.</p>.<p>‘ಕಪ್ಪು ಶಿಲೀಂದ್ರ ಚಿಕಿತ್ಸೆಗೆ ಔಷಧ ಭಾರತದಲ್ಲಿ ತಯಾರಾಗದ ಕಾರಣ ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಿದೆ’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.</p>.<p>ಕಪ್ಪು ಶಿಲೀಂದ್ರ ಸೋಂಕಿನಿಂದ ಎಷ್ಟು ಜನರ ಬಳಲುತ್ತಿದ್ದಾರೆ ಎಂಬುದರ ಕುರಿತು ಜಿಲ್ಲಾವಾರು ಮಾಹಿತಿ ನೀಡುವಂತೆ ತಿಳಿಸಿದ ಪೀಠ, ‘ಔಷಧ ಕೊರತೆಯನ್ನು ಕೂಡಲೇ ಸರಿದೂಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>