‘ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾದವರ ಸಂಖ್ಯೆ ಎಷ್ಟು, ಚಿಕಿತ್ಸೆಗೆ ಲಭ್ಯ ಇರುವ ಔಷಧದ ಪ್ರಮಾಣ ಎಷ್ಟು’ ಎಂಬ ವಿವರ ಸಲ್ಲಿಸುವಂತೆ ಪೀಠ ಸೂಚಿಸಿತು. ‘ರಾಜ್ಯದಲ್ಲಿ ಚುಚ್ಚುಮದ್ದು ಕೊರತೆ ಇದೆ. ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೊರತೆ ಸರಿದೂಗಿಸಲು ಪ್ರಯತ್ನಿಸುತ್ತಿದೆ’ ಎಂದು ಅಡ್ವೊಕೇಟ್ ಜನರಲ್ ಮಾಹಿತಿ ನೀಡಿದರು.