2020ರಲ್ಲಿ ಮೊದಲ ಮುದ್ರಣಗೊಂಡ ಕೃತಿಗಳನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಅನುವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಪ್ರೊ.ಎಂ.ಎಸ್. ರಘುನಾಥ್ ಹಾಗೂ ಪ್ರೊ. ನಗರಗೆರೆ ರಮೇಶ್ ಇದ್ದರು.ಯುವ ಬರಹಗಾರರ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಆನಂದರಾಮ ಉಪಾಧ್ಯ ಮತ್ತು ಡಾ.ಜಿ.ವಿ.ಆನಂದಮೂರ್ತಿ ಇದ್ದರು.ಈ ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು, ಫಲಕವನ್ನು ಒಳಗೊಂಡಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.