<p><strong>ಬೆಂಗಳೂರು: </strong>ಸಾಲದ ಸುಳಿಯಲ್ಲಿ ಸಿಲುಕಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡೀಸೆಲ್ಗಾಗಿ ಪರದಾಡುವ ಸ್ಥಿತಿ ಎದುರಾಗಿದೆ.</p>.<p>ಈ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ಸಾರಿಗೆ ವ್ಯವಸ್ಥೆಯ ಇತಿಹಾಸದಲ್ಲೇ ಡೀಸೆಲ್ ಇಲ್ಲದೆ ಬಸ್ಸುಗಳು ನಿಲ್ಲುವ ಸ್ಥಿತಿ ಒದಗಿದ್ದು ಇದೇ ಮೊದಲ ಬಾರಿ. ಬಿಎಂಟಿಸಿಯನ್ನು ದುಸ್ಥಿತಿಗೆ ತಂದಿಟ್ಟಿದ್ದಕ್ಕೆ ಸಾರಿಗೆ ಸಚಿವರನ್ನು ಸನ್ಮಾನಿಸಬೇಕೇ’ ಎಂದು ಪ್ರಶ್ನಿಸಿದೆ.</p>.<p>‘ತೈಲ ಕಂಪನಿಗಳ ಎದುರು ಹೆದರಿ ಕುಳಿತಿರುವ ಸರ್ಕಾರದ ಅಸಾಮರ್ಥ್ಯಕ್ಕೆ ಜನತೆ ಹಾಗೂ ಬಿಎಂಟಿಸಿ ಸಂಕಷ್ಟ ಎದುರಿಸಬೇಕಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ಡಿಪೊಗಳಿಗೆ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ಗಳ ಬಳಿ ಬಿಎಂಟಿಸಿ ಬಸ್ಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.</p>.<p>‘ನಮ್ಮ ಡಿಪೊಗಳಲ್ಲಿನ ಬಂಕ್ಗಳಿಗೆ ಟ್ಯಾಂಕರ್ಗಳ ಮೂಲಕ ಡೀಸೆಲ್ ಪೂರೈಸುತ್ತಿದ್ದ ವ್ಯಾಪಾರಿಗಳಿಗೆ ಕಂಪನಿಗಳು ಬೆದರಿಕೆ ಹಾಕುತ್ತಿವೆ. ಬಿಎಂಟಿಸಿಗೆ ಡೀಸೆಲ್ ಪೂರೈಸಿದರೆ ಪರವಾನಗಿ ರದ್ದುಪಡಿಸುವ ಬೆದರಿಕೆ ಹಾಕುತ್ತಿವೆ. ಇದರಿಂದಾಗಿ ವ್ಯಾಪಾರಿಗಳು ನಮಗೆ ಡೀಸೆಲ್ ಪೂರೈಸಲು ಹೆದರುತ್ತಿದ್ದಾರೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಹೇಳಿದ್ದರು.</p>.<p>ಎಚ್ಪಿಸಿಎಲ್ನಿಂದ ಇಂಧನ ಖರೀದಿಸುತ್ತಿದ್ದ ಬಿಎಂಟಿಸಿ, ₹70 ಕೋಟಿ ಬಾಕಿ ಉಳಿಸಿಕೊಂಡಿದೆ. ಇದಲ್ಲದೇ ಸಗಟು ಖರೀದಿ ದರ ಪ್ರತಿ ಲೀಟರ್ ಡೀಸೆಲ್ಗೆ ₹119 ಆಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಡೀಸೆಲ್ ದರ ಲೀಟರ್ಗೆ ₹87 ಇದೆ. ಇದರಿಂದಾಗಿ ಬಿಎಂಟಿಸಿ, ಚಿಲ್ಲರೆ ವ್ಯಾಪಾರಿಗಳಿಂದಲೇ ಡೀಸೆಲ್ ಖರೀದಿಸಿ ಬಸ್ಗಳ ಸಂಚಾರವನ್ನು ಸುಗಮ ಮಾಡಿಕೊಂಡಿತ್ತು. ಚಿಲ್ಲರೆ ವ್ಯಾಪಾರಿಗಳೇ ಟ್ಯಾಂಕರ್ಗಳಲ್ಲಿ ಪ್ರತಿದಿನ ಸಂಸ್ಥೆಗಳ ಡಿಪೊಗಳಲ್ಲಿರುವ ಬಂಕ್ಗಳಿಗೆ ಪೂರೈಕೆ ಮಾಡುತ್ತಿದ್ದರು. ಅಂದಿನ ಡೀಸೆಲ್ ಮೊತ್ತವನ್ನು ಅಂದೇ ಪಾವತಿಸಿ ಬಿಎಂಟಿಸಿ ಕೈತೊಳೆದುಕೊಳ್ಳುತ್ತಿತ್ತು. ಈ ಪ್ರಕ್ರಿಯೆ ಎರಡು ತಿಂಗಳಿಂದ ನಡೆದುಕೊಂಡು ಬಂದಿದೆ.</p>.<p><strong>ಓದಿ...</strong></p>.<p><strong><a href="https://www.prajavani.net/district/bengaluru-city/bmtc-running-out-of-diesel-948986.html" target="_blank">ಡೀಸೆಲ್ಗಾಗಿ ಬಿಎಂಟಿಸಿ ಪರದಾಟ: ಡಿಪೊಗಳಿಗಿಲ್ಲ ಸರಬರಾಜು , ಖಾಸಗಿಗೆ ಮೊರೆ</a></strong></p>.<p><strong><a href="https://www.prajavani.net/karnataka-news/karnataka-politics-congress-high-command-bjp-dk-shivakumar-siddaramaiah-949617.html" target="_blank">ಸಿಎಂ ಸ್ಥಾನಕ್ಕೆ ಡಿಕೆಶಿ ಲಾಬಿ, ಸಿದ್ದುಗೆ ಒಂಟಿತನ ಕಾಡುತ್ತಿದೆ: ಬಿಜೆಪಿ ವ್ಯಂಗ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾಲದ ಸುಳಿಯಲ್ಲಿ ಸಿಲುಕಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡೀಸೆಲ್ಗಾಗಿ ಪರದಾಡುವ ಸ್ಥಿತಿ ಎದುರಾಗಿದೆ.</p>.<p>ಈ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ಸಾರಿಗೆ ವ್ಯವಸ್ಥೆಯ ಇತಿಹಾಸದಲ್ಲೇ ಡೀಸೆಲ್ ಇಲ್ಲದೆ ಬಸ್ಸುಗಳು ನಿಲ್ಲುವ ಸ್ಥಿತಿ ಒದಗಿದ್ದು ಇದೇ ಮೊದಲ ಬಾರಿ. ಬಿಎಂಟಿಸಿಯನ್ನು ದುಸ್ಥಿತಿಗೆ ತಂದಿಟ್ಟಿದ್ದಕ್ಕೆ ಸಾರಿಗೆ ಸಚಿವರನ್ನು ಸನ್ಮಾನಿಸಬೇಕೇ’ ಎಂದು ಪ್ರಶ್ನಿಸಿದೆ.</p>.<p>‘ತೈಲ ಕಂಪನಿಗಳ ಎದುರು ಹೆದರಿ ಕುಳಿತಿರುವ ಸರ್ಕಾರದ ಅಸಾಮರ್ಥ್ಯಕ್ಕೆ ಜನತೆ ಹಾಗೂ ಬಿಎಂಟಿಸಿ ಸಂಕಷ್ಟ ಎದುರಿಸಬೇಕಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ಡಿಪೊಗಳಿಗೆ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ಗಳ ಬಳಿ ಬಿಎಂಟಿಸಿ ಬಸ್ಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.</p>.<p>‘ನಮ್ಮ ಡಿಪೊಗಳಲ್ಲಿನ ಬಂಕ್ಗಳಿಗೆ ಟ್ಯಾಂಕರ್ಗಳ ಮೂಲಕ ಡೀಸೆಲ್ ಪೂರೈಸುತ್ತಿದ್ದ ವ್ಯಾಪಾರಿಗಳಿಗೆ ಕಂಪನಿಗಳು ಬೆದರಿಕೆ ಹಾಕುತ್ತಿವೆ. ಬಿಎಂಟಿಸಿಗೆ ಡೀಸೆಲ್ ಪೂರೈಸಿದರೆ ಪರವಾನಗಿ ರದ್ದುಪಡಿಸುವ ಬೆದರಿಕೆ ಹಾಕುತ್ತಿವೆ. ಇದರಿಂದಾಗಿ ವ್ಯಾಪಾರಿಗಳು ನಮಗೆ ಡೀಸೆಲ್ ಪೂರೈಸಲು ಹೆದರುತ್ತಿದ್ದಾರೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಹೇಳಿದ್ದರು.</p>.<p>ಎಚ್ಪಿಸಿಎಲ್ನಿಂದ ಇಂಧನ ಖರೀದಿಸುತ್ತಿದ್ದ ಬಿಎಂಟಿಸಿ, ₹70 ಕೋಟಿ ಬಾಕಿ ಉಳಿಸಿಕೊಂಡಿದೆ. ಇದಲ್ಲದೇ ಸಗಟು ಖರೀದಿ ದರ ಪ್ರತಿ ಲೀಟರ್ ಡೀಸೆಲ್ಗೆ ₹119 ಆಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಡೀಸೆಲ್ ದರ ಲೀಟರ್ಗೆ ₹87 ಇದೆ. ಇದರಿಂದಾಗಿ ಬಿಎಂಟಿಸಿ, ಚಿಲ್ಲರೆ ವ್ಯಾಪಾರಿಗಳಿಂದಲೇ ಡೀಸೆಲ್ ಖರೀದಿಸಿ ಬಸ್ಗಳ ಸಂಚಾರವನ್ನು ಸುಗಮ ಮಾಡಿಕೊಂಡಿತ್ತು. ಚಿಲ್ಲರೆ ವ್ಯಾಪಾರಿಗಳೇ ಟ್ಯಾಂಕರ್ಗಳಲ್ಲಿ ಪ್ರತಿದಿನ ಸಂಸ್ಥೆಗಳ ಡಿಪೊಗಳಲ್ಲಿರುವ ಬಂಕ್ಗಳಿಗೆ ಪೂರೈಕೆ ಮಾಡುತ್ತಿದ್ದರು. ಅಂದಿನ ಡೀಸೆಲ್ ಮೊತ್ತವನ್ನು ಅಂದೇ ಪಾವತಿಸಿ ಬಿಎಂಟಿಸಿ ಕೈತೊಳೆದುಕೊಳ್ಳುತ್ತಿತ್ತು. ಈ ಪ್ರಕ್ರಿಯೆ ಎರಡು ತಿಂಗಳಿಂದ ನಡೆದುಕೊಂಡು ಬಂದಿದೆ.</p>.<p><strong>ಓದಿ...</strong></p>.<p><strong><a href="https://www.prajavani.net/district/bengaluru-city/bmtc-running-out-of-diesel-948986.html" target="_blank">ಡೀಸೆಲ್ಗಾಗಿ ಬಿಎಂಟಿಸಿ ಪರದಾಟ: ಡಿಪೊಗಳಿಗಿಲ್ಲ ಸರಬರಾಜು , ಖಾಸಗಿಗೆ ಮೊರೆ</a></strong></p>.<p><strong><a href="https://www.prajavani.net/karnataka-news/karnataka-politics-congress-high-command-bjp-dk-shivakumar-siddaramaiah-949617.html" target="_blank">ಸಿಎಂ ಸ್ಥಾನಕ್ಕೆ ಡಿಕೆಶಿ ಲಾಬಿ, ಸಿದ್ದುಗೆ ಒಂಟಿತನ ಕಾಡುತ್ತಿದೆ: ಬಿಜೆಪಿ ವ್ಯಂಗ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>